Homeಕರ್ನಾಟಕಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದ್ದ ಸಮಾಜ ಸುಧಾರಕ ನಾರಾಯಣಗುರು ಹಾಗೂ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಅವರ ಕುರಿತ ಪಾಠವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು, “ನಾರಾಯಣಗುರು ಪಾಠವನ್ನು ಕೈಬಿಟ್ಟಿಲ್ಲ. ಏಳು ಮತ್ತು ಎಂಟನೇ ತರಗತಿ ಎರಡೂ ಕಡೆಯೂ ಉಳಿಸಿಕೊಳ್ಳಲಾಗಿದೆ” ಎಂದು ಹೇಳುತ್ತಾ ಬಂದಿದ್ದರು. ಆದರೆ ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಾಠ ಇಲ್ಲ ಎಂಬುದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವೆಬ್‌ಸೈಟ್‌ನಲ್ಲಿರುವ ಪಿಡಿಎಫ್‌ಗಳಿಂದ ಸ್ಪಷ್ಟವಾಗುತ್ತದೆ.

7ನೇ ತರಗತಿಯಲ್ಲಿ ಅಳವಡಿಸಲಾಗಿರುವ ‘ಸಮಾಜ ಸುಧಾರಕರ ಕುರಿತ ಪಾಠ’ವನ್ನು 10ನೇ ತರಗತಿಯಲ್ಲಿ ವಿಸ್ತರಿಸಲಾಗಿದೆ. 7ನೇ ತರಗತಿಯಲ್ಲಿ ಇದ್ದ ಅನೇಕ ಮಹನೀಯರ ವಿವರಗಳನ್ನು ಹತ್ತನೇ ತರಗತಿಯಲ್ಲಿ ಮುಂದುವರಿಸಲಾಗಿದ್ದರೂ ಮಹಾನ್‌ ಮಾನವತಾವಾದಿ ನಾರಾಯಣಗುರುಗಳ ವಿವರಗಳನ್ನು ಸಮಿತಿ ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಪರಿಚಯ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ವಿವರಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಏಳನೇ ತರಗತಿಯಲ್ಲಿ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಪಾಠ ಈ ಹಿಂದಿನ ಪಠ್ಯದಲ್ಲೂ ಇರಲಿಲ್ಲ. ಈಗಿನ ಪಠ್ಯದಲ್ಲೂ ಏಳನೇ ತರಗತಿಯಲ್ಲಿ ಇರಲಿಲ್ಲ. ಆದರೆ ಹತ್ತನೇ ತರಗತಿ ಪಠ್ಯದಲ್ಲಿ ‘ಪೆರಿಯಾರ್‌’ ಪಾಠವನ್ನು ಈ ಹಿಂದೆ ಸೇರಿಸಲಾಗಿತ್ತು.

ಹತ್ತನೇ ತರಗತಿಯಲ್ಲಿ ನಾರಾಯಣಗುರುಗಳ ಪಾಠಕ್ಕೆ ಕೋಕ್‌

ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ -1ರಲ್ಲಿ ಐದನೆಯ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣ ಚಳುವಳಿಗಳು’ ಭಾಗವನ್ನು ಇರಿಸಿದೆ. ಏಳನೇ ತರಗತಿಯಲ್ಲಿದ್ದ ಪಠ್ಯವನ್ನು ಹತ್ತನೇ ತರಗತಿಯಲ್ಲಿ ವಿಸ್ತರಿಸಲಾಗಿದೆ ಎನ್ನುವ ಚಕ್ರತೀರ್ಥ ಅವರು, ಏಳನೇ ತರಗತಿಯಲ್ಲಿ ನೀಡಲಾಗಿದ್ದ ಅನೇಕ ಸಮಾಜ ಸುಧಾರಕರ ವಿವರಗಳನ್ನು ಉಳಿಸಿಕೊಂಡು ನಾರಾಯಣಗುರುಗಳ ಪಾಠವನ್ನು ತೆಗೆದುಹಾಕಿದೆ.

ಬ್ರಹ್ಮ ಸಮಾಜ, ಆರ್ಯ ಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಚಳವಳಿ, ರಾಮಕೃಷ್ಣ ಮಿಷನ್‌, ಥಿಯಾಸಾಫಿಕಲ್ ಸೊಸೈಟಿ (ಬ್ರಹ್ಮವಿದ್ಯಾ ಸಮಾಜ)- ಇಷ್ಟನ್ನು ಪರಿಚಯ ಮಾಡಿಕೊಡಲಾಗಿದೆ. ನಾರಾಯಣಗುರುಗಳ ವಿವರ ಇಲ್ಲವಾಗಿದೆ. (ಪಿಡಿಎಫ್‌ ಪ್ರತಿ ನೋಡಿರಿ)

ಇದನ್ನೂ ಓದಿರಿ: Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಬಸವಣ್ಣನವರ ಪಾಠ ವೈದೀಕರಣ; ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ

ಹಳೆಯ ಪಠ್ಯದಲ್ಲಿತ್ತೇ ನಾರಾಯಣಗುರುಗಳ ಪಾಠ?

ಬರಗೂರರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಪಠ್ಯದಲ್ಲಿ ನಾರಾಯಣಗುರುಗಳ ಪಾಠವನ್ನು ವಿಸ್ತರಿಸುವುದನ್ನು ಕಾಣಬಹುದಿತ್ತು. ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿನ ಭಾಗ -1ರಲ್ಲಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು’ ಇದ್ದು, ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಸುಧಾರಣಾ ಚಳವಳಿ, ರಾಮಕೃಷ್ಣ ಮಿಷನ್‌, ಥಿಯೋಸಾಫಿಕಲ್ ಸೊಸೈಟಿ, ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಜೊತೆಗೆ ಪೆರಿಯಾರ್ ಕುರಿತು ವಿವರಿಸಲಾಗಿತ್ತು. ಈಗ ಹೊಸ ಪಠ್ಯದಲ್ಲಿ ನಾರಾಯಣಗುರುಗಳೂ ಇಲ್ಲ, ಪೆರಿಯಾರ್‌ ಕೂಡ ಇಲ್ಲ.

ಪಠ್ಯ ಪುಸ್ತಕ ವಿವಾದದ ಆರಂಭದಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ರೋಹಿತ್ ಚಕ್ರತೀರ್ಥ, “ಅರ್ಧ ಪಠ್ಯಪುಸ್ತಕವನ್ನು ತಿಳಿದುಕೊಂಡಿರುವವರು ಈ ಆರೋಪ ಮಾಡುತ್ತಿದ್ದಾರೆ. ಸುರಳಿಯಾಕಾರದ ಕಲಿಕೆ ಪ್ರಕಾರ ವಿಷಯವೊಂದರ ಕುರಿತು ಒಂದು ತರಗತಿಯಲ್ಲಿ ಕಲಿತರೆ, ಮುಂದುವರಿದಿದ್ದನ್ನು ಮುಂದಿನ ತರಗತಿಯಲ್ಲಿ ಕಲಿಯುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲ ಸುಧಾರಕರ ಕುರಿತು ತಿಳಿಸಲಾಗಿದೆ. ಅಲ್ಲಿ ನಾರಾಯಣಗುರುಗಳು ಹಾಗೂ ಪೆರಿಯಾರ್‌ ಅವರ ವಿಷಯ ಬಂದಿದೆ. ಹತ್ತನೇ ತರಗತಿಯಲ್ಲಿ ಇದರ ವಿಸ್ತೃತ ರೂಪವಾಗಿ ಸಾಮಾಜಿಕ ಧಾರ್ಮಿಕ ಸಂಸ್ಥೆಗಳ ಪಾಠವನ್ನು ನೀಡಲಾಗಿದೆ” ಎಂದಿದ್ದರು. (ಸಂದರ್ಶನ ‘ಇಲ್ಲಿ’ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...