Homeಕರ್ನಾಟಕಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದ್ದ ಸಮಾಜ ಸುಧಾರಕ ನಾರಾಯಣಗುರು ಹಾಗೂ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಅವರ ಕುರಿತ ಪಾಠವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು, “ನಾರಾಯಣಗುರು ಪಾಠವನ್ನು ಕೈಬಿಟ್ಟಿಲ್ಲ. ಏಳು ಮತ್ತು ಎಂಟನೇ ತರಗತಿ ಎರಡೂ ಕಡೆಯೂ ಉಳಿಸಿಕೊಳ್ಳಲಾಗಿದೆ” ಎಂದು ಹೇಳುತ್ತಾ ಬಂದಿದ್ದರು. ಆದರೆ ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಾಠ ಇಲ್ಲ ಎಂಬುದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವೆಬ್‌ಸೈಟ್‌ನಲ್ಲಿರುವ ಪಿಡಿಎಫ್‌ಗಳಿಂದ ಸ್ಪಷ್ಟವಾಗುತ್ತದೆ.

7ನೇ ತರಗತಿಯಲ್ಲಿ ಅಳವಡಿಸಲಾಗಿರುವ ‘ಸಮಾಜ ಸುಧಾರಕರ ಕುರಿತ ಪಾಠ’ವನ್ನು 10ನೇ ತರಗತಿಯಲ್ಲಿ ವಿಸ್ತರಿಸಲಾಗಿದೆ. 7ನೇ ತರಗತಿಯಲ್ಲಿ ಇದ್ದ ಅನೇಕ ಮಹನೀಯರ ವಿವರಗಳನ್ನು ಹತ್ತನೇ ತರಗತಿಯಲ್ಲಿ ಮುಂದುವರಿಸಲಾಗಿದ್ದರೂ ಮಹಾನ್‌ ಮಾನವತಾವಾದಿ ನಾರಾಯಣಗುರುಗಳ ವಿವರಗಳನ್ನು ಸಮಿತಿ ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಪರಿಚಯ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ವಿವರಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಏಳನೇ ತರಗತಿಯಲ್ಲಿ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಪಾಠ ಈ ಹಿಂದಿನ ಪಠ್ಯದಲ್ಲೂ ಇರಲಿಲ್ಲ. ಈಗಿನ ಪಠ್ಯದಲ್ಲೂ ಏಳನೇ ತರಗತಿಯಲ್ಲಿ ಇರಲಿಲ್ಲ. ಆದರೆ ಹತ್ತನೇ ತರಗತಿ ಪಠ್ಯದಲ್ಲಿ ‘ಪೆರಿಯಾರ್‌’ ಪಾಠವನ್ನು ಈ ಹಿಂದೆ ಸೇರಿಸಲಾಗಿತ್ತು.

ಹತ್ತನೇ ತರಗತಿಯಲ್ಲಿ ನಾರಾಯಣಗುರುಗಳ ಪಾಠಕ್ಕೆ ಕೋಕ್‌

ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ -1ರಲ್ಲಿ ಐದನೆಯ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣ ಚಳುವಳಿಗಳು’ ಭಾಗವನ್ನು ಇರಿಸಿದೆ. ಏಳನೇ ತರಗತಿಯಲ್ಲಿದ್ದ ಪಠ್ಯವನ್ನು ಹತ್ತನೇ ತರಗತಿಯಲ್ಲಿ ವಿಸ್ತರಿಸಲಾಗಿದೆ ಎನ್ನುವ ಚಕ್ರತೀರ್ಥ ಅವರು, ಏಳನೇ ತರಗತಿಯಲ್ಲಿ ನೀಡಲಾಗಿದ್ದ ಅನೇಕ ಸಮಾಜ ಸುಧಾರಕರ ವಿವರಗಳನ್ನು ಉಳಿಸಿಕೊಂಡು ನಾರಾಯಣಗುರುಗಳ ಪಾಠವನ್ನು ತೆಗೆದುಹಾಕಿದೆ.

ಬ್ರಹ್ಮ ಸಮಾಜ, ಆರ್ಯ ಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಚಳವಳಿ, ರಾಮಕೃಷ್ಣ ಮಿಷನ್‌, ಥಿಯಾಸಾಫಿಕಲ್ ಸೊಸೈಟಿ (ಬ್ರಹ್ಮವಿದ್ಯಾ ಸಮಾಜ)- ಇಷ್ಟನ್ನು ಪರಿಚಯ ಮಾಡಿಕೊಡಲಾಗಿದೆ. ನಾರಾಯಣಗುರುಗಳ ವಿವರ ಇಲ್ಲವಾಗಿದೆ. (ಪಿಡಿಎಫ್‌ ಪ್ರತಿ ನೋಡಿರಿ)

ಇದನ್ನೂ ಓದಿರಿ: Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಬಸವಣ್ಣನವರ ಪಾಠ ವೈದೀಕರಣ; ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ

ಹಳೆಯ ಪಠ್ಯದಲ್ಲಿತ್ತೇ ನಾರಾಯಣಗುರುಗಳ ಪಾಠ?

ಬರಗೂರರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಪಠ್ಯದಲ್ಲಿ ನಾರಾಯಣಗುರುಗಳ ಪಾಠವನ್ನು ವಿಸ್ತರಿಸುವುದನ್ನು ಕಾಣಬಹುದಿತ್ತು. ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿನ ಭಾಗ -1ರಲ್ಲಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು’ ಇದ್ದು, ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಸುಧಾರಣಾ ಚಳವಳಿ, ರಾಮಕೃಷ್ಣ ಮಿಷನ್‌, ಥಿಯೋಸಾಫಿಕಲ್ ಸೊಸೈಟಿ, ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಜೊತೆಗೆ ಪೆರಿಯಾರ್ ಕುರಿತು ವಿವರಿಸಲಾಗಿತ್ತು. ಈಗ ಹೊಸ ಪಠ್ಯದಲ್ಲಿ ನಾರಾಯಣಗುರುಗಳೂ ಇಲ್ಲ, ಪೆರಿಯಾರ್‌ ಕೂಡ ಇಲ್ಲ.

ಪಠ್ಯ ಪುಸ್ತಕ ವಿವಾದದ ಆರಂಭದಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ರೋಹಿತ್ ಚಕ್ರತೀರ್ಥ, “ಅರ್ಧ ಪಠ್ಯಪುಸ್ತಕವನ್ನು ತಿಳಿದುಕೊಂಡಿರುವವರು ಈ ಆರೋಪ ಮಾಡುತ್ತಿದ್ದಾರೆ. ಸುರಳಿಯಾಕಾರದ ಕಲಿಕೆ ಪ್ರಕಾರ ವಿಷಯವೊಂದರ ಕುರಿತು ಒಂದು ತರಗತಿಯಲ್ಲಿ ಕಲಿತರೆ, ಮುಂದುವರಿದಿದ್ದನ್ನು ಮುಂದಿನ ತರಗತಿಯಲ್ಲಿ ಕಲಿಯುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲ ಸುಧಾರಕರ ಕುರಿತು ತಿಳಿಸಲಾಗಿದೆ. ಅಲ್ಲಿ ನಾರಾಯಣಗುರುಗಳು ಹಾಗೂ ಪೆರಿಯಾರ್‌ ಅವರ ವಿಷಯ ಬಂದಿದೆ. ಹತ್ತನೇ ತರಗತಿಯಲ್ಲಿ ಇದರ ವಿಸ್ತೃತ ರೂಪವಾಗಿ ಸಾಮಾಜಿಕ ಧಾರ್ಮಿಕ ಸಂಸ್ಥೆಗಳ ಪಾಠವನ್ನು ನೀಡಲಾಗಿದೆ” ಎಂದಿದ್ದರು. (ಸಂದರ್ಶನ ‘ಇಲ್ಲಿ’ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...