Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...