Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...