Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...