Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...