Homeಕರ್ನಾಟಕರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ಚಕ್ರವರ್ತಿ ಸೂಲಿಬೆಲೆಯವರನ್ನು ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉಡಾಫೆಯಾಗಿ ಉತ್ತರಿಸಿದ್ದಾರೆ.

- Advertisement -
- Advertisement -

ಬಹುರೂಪಿ ಮೈಸೂರು ರಂಗಾಯಣದ ಪ್ರತಿಷ್ಟಿತ ರಾಷ್ಟ್ರೀಯ ನಾಟಕೋತ್ಸವ. ಪ್ರತಿವರ್ಷ ಯಾವುದಾದರೂ ಒಂದು ವಿಷಯವಸ್ತು ಇಟ್ಟುಕೊಂಡು ರಾಷ್ಟ್ರೀಯ ನಾಟಕೋತ್ಸವ ಹಾಗೂ ರಾಷ್ಟ್ರೀಯ ವಿಚಾರಸಂಕಿರಣವನ್ನು ರಂಗಾಯಣ ಇಲ್ಲಿಯವರೆಗೆ ನಡೆಸಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಬಹುರೂಪಿ ನಾಟಕೋತ್ಸವ ಕಂಡಿದೆ. ಬಹುತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಹುರೂಪಿಯ ಮೂಲಕ ರಂಗಾಯಣ ಸವೆಸಿರುವ ಹಾದಿ ದೊಡ್ಡದು. ಅಂತಹ ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದಗಳ ಕೇಂದ್ರವಾಗುತ್ತಿದೆ.

ಅಡ್ಡಂಡ ಸಿ.ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಬಳಿಕ ಒಂದಿಲ್ಲೊಂದು ವಿವಾದಗಳಲ್ಲಿ ರಂಗಾಯಣ ಸಿಲುಕುತ್ತಲೇ ಇದ್ದು, ಪ್ರಸಕ್ತ ಬಹುರೂಪಿ ಕಾರ್ಯಕ್ರಮವೂ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಲಪಂಥೀಯ ವಿಚಾರಧಾರೆಯ ಅಡ್ಡಂಡ ಸಿ.ಕಾರ್ಯಪ್ಪ ಅವರು ಅದೇ ವಿಚಾರಧಾರೆಯುಳ್ಳವರನ್ನು ಹೆಚ್ಚಿನ ಸಂಖ್ಯೆಯಲ್ಲಿ ರಂಗಾಯಣಕ್ಕೆ ಕರೆಸಿಕೊಳ್ಳುವುದು ಮತ್ತು ಹೆಚ್ಚಿನ ಅವಕಾಶ ನೀಡುವುದು ಈಗ ಗುಟ್ಟಿನ ವಿಷಯವೇನಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅಂಥವರನ್ನು ಬಹುರೂಪಿ ನಾಟಕೋತ್ಸವ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಕರೆಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

‘ತಾಯಿ’ ಎಂಬುದು ಈ ಬಾರಿಯ ಬಹುರೂಪಿಯ ವಿಷಯವಸ್ತುವಾಗಿದೆ. ಪದ್ಮಶ್ರೀ ಪುರಸ್ಕೃತ ತುಳಸೀಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಬಿಜೆಪಿ ನಾಯಕಿ, ನಟಿ ಮಾಳವಿಕಾ ಅವಿನಾಶ್ ಅವರಿಂದ ಉದ್ಘಾಟನಾ ಭಾಷಣ ಮಾಡಿಸಲು ರಂಗಾಯಣ ಹೊರಟಿದೆ. ಉದ್ಘಾಟನೆಗೆ ಒಬ್ಬರು, ಉದ್ಘಾಟನಾ ಭಾಷಣಕ್ಕೆ ಒಬ್ಬರು ಭಾಷಣ ಮಾಡುವುದು ಹೊಸ ಸಂಪ್ರದಾಯ ಎನ್ನಲಾಗುತ್ತಿದೆ. ಆದರೆ ಈ ಕುರಿತು ರಂಗಾಯಣ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಮಾಳವಿಕ ಅವರನ್ನು ವಿಶೇಷ ಅತಿಥಿಯಾಗಿ ಕರೆಸುವ ಚಿಂತನೆ ನಡೆಸಲಾಗುತ್ತಿದೆ. ಆದರೆ ಈಗಾಗಲೇ ವಿಚಾರಸಂಕಿರಣಕ್ಕೆ ಸಂಬಂಧಿಸಿದ ಅತಿಥಿಗಳ ಪಟ್ಟಿ ಸಿದ್ಧವಾಗಿದೆ. ಡಿಸೆಂಬರ್‌ 10ರಿಂದ ಡಿ.19ರವರೆಗೆ ಬಹುರೂಪಿ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಡಿಸೆಂಬರ್‌‌ 11ರಂದು ಜರುಗಲಿದೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಡಿಸೆಂಬರ್‌ 12 ಮತ್ತು 13ರಂದು ಬಹುರೂಪಿ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ನಾ.ಡಿಸೋಜ, ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಚೂಡಾರತ್ನಮ್ಮ, ದಕ್ಷಿಣ ಮೂರ್ತಿ, ಕೃಷ್ಣಕುಮಾರ್‌, ಅಭಿರುಚಿ ಚಂದ್ರು, ಭುವನೇಶ್ವರಿ ಹೆಗಡೆ, ಎಚ್.ಎಸ್.ವೆಂಕಟೇಶ್‌ ಮೂರ್ತಿಯವರು ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.13ರಂದು ನಡೆಯುವ ಭಾಷಣ ಸ್ಪರ್ಧೆಯ ಬಳಿಕ, ಅಂದು ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ. ಅಲ್ಲದೆ ಆಮಂತ್ರಣ ಪತ್ರಿಕೆಯಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಗೆ ‘ಸಮಾಜಸೇವಕ’ ಎಂಬ ವಿಶೇಷಣ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಪ್ಪ ಉಡಾಫೆ ಪ್ರತಿಕ್ರಿಯೆ

ಮೈಸೂರಿನಲ್ಲಿ ಬುಧವಾರ ಅಡ್ಡಂಡ ಕಾರ್ಯಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಪತ್ರಕರ್ತರ ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರಗಳನ್ನು ನೀಡಿಲ್ಲ. ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿರುವುದನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಅಡ್ಡಂಡ ಕಾರ್ಯಪ್ಪ ಅವರು ಉಡಾಫೆಯಿಂದ ಉತ್ತರಿಸಿದ್ದಾರೆ.

“ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದಾರೆ.

“ಜನರಿಗೆ ಇವರಿಂದ ಏನು ಸಂದೇಶ ಕೊಡುತ್ತೀರಿ?” ಎಂದು ಕೇಳಿದರೆ, “ಯುವಕರಿಗೆ ಸಂದೇಶವನ್ನು ಕೊಡುತ್ತೀವಿ” ಎಂದಿದ್ದಾರೆ. “ನಾವು ಚರ್ಚೆ ಮಾಡಿ ಒಂದಿಷ್ಟು ಜನರನ್ನು ಕರೆದಿದ್ದೇವೆ” ಎಂದು ಕಾರ್ಯಪ್ಪ ಪ್ರತಿಕ್ರಿಯೆ ನೀಡುತ್ತಾರೆ. “ಚಕ್ರವರ್ತಿ ಸೂಲಿಬೆಲೆಯವರು ರೈತರ ಬಗ್ಗೆ, ರಂಗಭೂಮಿ ಬಗ್ಗೆ ಯಾವತ್ತೂ ಮಾತನಾಡಲ್ಲ. ಯಾರೋ ಒಬ್ಬರನ್ನು ಒಲೈಸುತ್ತಾರೆ” ಎಂದು ಪತ್ರಕರ್ತರು ಕೇಳಿದರೆ, “ಮಾಧ್ಯಮದ ಕೆಲವರಿಗೆ ಹಾಗೆ ಅನ್ನಿಸಿರಬಹುದು, ಎಲ್ಲರಿಗೂ ಅಲ್ಲ” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿರಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು


ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗಲೂ ಹೀಗೆಯೇ ಉಡಾಫೆ ಉತ್ತರಗಳನ್ನೇ ನೀಡಿದರು. “ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ. ಅವರನ್ನು ಕರೆಸುವುದು ಎಷ್ಟು ಸರಿ? ಸಂಘಪರಿವಾರದ ವಿಚಾರಧಾರೆಗಳ ವ್ಯಕ್ತಿಗಳಾದರೂ ಎಲ್ಲ ಜನವರ್ಗವನ್ನು ಗೌರವಿಸುವ ಬಲಪಂಥೀಯರನ್ನು ಕರೆಸಬಹುದಲ್ಲ?” ಎಂದು ಕೇಳಿದೆವು. ನಮ್ಮ ಮಾಧ್ಯಮದ ಕುರಿತು ಲಘುವಾಗಿ ಮಾತನಾಡುತ್ತಲೇ ಉತ್ತರಿಸಿದ ಅವರು, “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದರೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವದ ವಿಷಯವನ್ನೇ ನಿರಾಕರಿಸಿದರು.

“ಸ್ವತಃ ಚಕ್ರವರ್ತಿ ಸೂಲಿಬೆಲೆಯವರೇ ತಾವು ಹೇಳಿರುವ ಮಾತುಗಳನ್ನು ಸತ್ಯವೆಂದು ಸಾಬೀತು ಮಾಡಲು ಸಾಧ್ಯವಾಗದಿರುವಾಗ, ನೀವು ಹೇಗೆ ಅವರು ಹೇಳುತ್ತಿರುವುದು ಸತ್ಯ ಎಂದು ಸಾಬೀತು ಮಾಡುತ್ತೀರಿ?” ಎಂದು ಕೇಳಿದೆವು. “ನಾನು ಅಷ್ಟು ಆಳಕ್ಕೆ ಇಳಿದಿಲ್ಲರ್‍ರೀ, ನೀವು ಆಳಕ್ಕೆ ಇಳಿದು ಏಕಮುಖ ವಿಚಾರಗಳನ್ನು ಬಿತ್ತುವ ಜನ್ಮದಲ್ಲಿ ಹುಟ್ಟಿದ್ದೀರಿ, ವಿವಾದ ಮಾಡಿಕೊಳ್ಳಿ” ಎಂದು ಹೇಳುತ್ತಾ ಮಾತುಮುಗಿಸಿದರು.


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...