Homeಕರ್ನಾಟಕರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ಚಕ್ರವರ್ತಿ ಸೂಲಿಬೆಲೆಯವರನ್ನು ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉಡಾಫೆಯಾಗಿ ಉತ್ತರಿಸಿದ್ದಾರೆ.

- Advertisement -
- Advertisement -

ಬಹುರೂಪಿ ಮೈಸೂರು ರಂಗಾಯಣದ ಪ್ರತಿಷ್ಟಿತ ರಾಷ್ಟ್ರೀಯ ನಾಟಕೋತ್ಸವ. ಪ್ರತಿವರ್ಷ ಯಾವುದಾದರೂ ಒಂದು ವಿಷಯವಸ್ತು ಇಟ್ಟುಕೊಂಡು ರಾಷ್ಟ್ರೀಯ ನಾಟಕೋತ್ಸವ ಹಾಗೂ ರಾಷ್ಟ್ರೀಯ ವಿಚಾರಸಂಕಿರಣವನ್ನು ರಂಗಾಯಣ ಇಲ್ಲಿಯವರೆಗೆ ನಡೆಸಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಬಹುರೂಪಿ ನಾಟಕೋತ್ಸವ ಕಂಡಿದೆ. ಬಹುತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಹುರೂಪಿಯ ಮೂಲಕ ರಂಗಾಯಣ ಸವೆಸಿರುವ ಹಾದಿ ದೊಡ್ಡದು. ಅಂತಹ ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದಗಳ ಕೇಂದ್ರವಾಗುತ್ತಿದೆ.

ಅಡ್ಡಂಡ ಸಿ.ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಬಳಿಕ ಒಂದಿಲ್ಲೊಂದು ವಿವಾದಗಳಲ್ಲಿ ರಂಗಾಯಣ ಸಿಲುಕುತ್ತಲೇ ಇದ್ದು, ಪ್ರಸಕ್ತ ಬಹುರೂಪಿ ಕಾರ್ಯಕ್ರಮವೂ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಲಪಂಥೀಯ ವಿಚಾರಧಾರೆಯ ಅಡ್ಡಂಡ ಸಿ.ಕಾರ್ಯಪ್ಪ ಅವರು ಅದೇ ವಿಚಾರಧಾರೆಯುಳ್ಳವರನ್ನು ಹೆಚ್ಚಿನ ಸಂಖ್ಯೆಯಲ್ಲಿ ರಂಗಾಯಣಕ್ಕೆ ಕರೆಸಿಕೊಳ್ಳುವುದು ಮತ್ತು ಹೆಚ್ಚಿನ ಅವಕಾಶ ನೀಡುವುದು ಈಗ ಗುಟ್ಟಿನ ವಿಷಯವೇನಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅಂಥವರನ್ನು ಬಹುರೂಪಿ ನಾಟಕೋತ್ಸವ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಕರೆಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

‘ತಾಯಿ’ ಎಂಬುದು ಈ ಬಾರಿಯ ಬಹುರೂಪಿಯ ವಿಷಯವಸ್ತುವಾಗಿದೆ. ಪದ್ಮಶ್ರೀ ಪುರಸ್ಕೃತ ತುಳಸೀಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಬಿಜೆಪಿ ನಾಯಕಿ, ನಟಿ ಮಾಳವಿಕಾ ಅವಿನಾಶ್ ಅವರಿಂದ ಉದ್ಘಾಟನಾ ಭಾಷಣ ಮಾಡಿಸಲು ರಂಗಾಯಣ ಹೊರಟಿದೆ. ಉದ್ಘಾಟನೆಗೆ ಒಬ್ಬರು, ಉದ್ಘಾಟನಾ ಭಾಷಣಕ್ಕೆ ಒಬ್ಬರು ಭಾಷಣ ಮಾಡುವುದು ಹೊಸ ಸಂಪ್ರದಾಯ ಎನ್ನಲಾಗುತ್ತಿದೆ. ಆದರೆ ಈ ಕುರಿತು ರಂಗಾಯಣ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಮಾಳವಿಕ ಅವರನ್ನು ವಿಶೇಷ ಅತಿಥಿಯಾಗಿ ಕರೆಸುವ ಚಿಂತನೆ ನಡೆಸಲಾಗುತ್ತಿದೆ. ಆದರೆ ಈಗಾಗಲೇ ವಿಚಾರಸಂಕಿರಣಕ್ಕೆ ಸಂಬಂಧಿಸಿದ ಅತಿಥಿಗಳ ಪಟ್ಟಿ ಸಿದ್ಧವಾಗಿದೆ. ಡಿಸೆಂಬರ್‌ 10ರಿಂದ ಡಿ.19ರವರೆಗೆ ಬಹುರೂಪಿ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಡಿಸೆಂಬರ್‌‌ 11ರಂದು ಜರುಗಲಿದೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಡಿಸೆಂಬರ್‌ 12 ಮತ್ತು 13ರಂದು ಬಹುರೂಪಿ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ನಾ.ಡಿಸೋಜ, ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಚೂಡಾರತ್ನಮ್ಮ, ದಕ್ಷಿಣ ಮೂರ್ತಿ, ಕೃಷ್ಣಕುಮಾರ್‌, ಅಭಿರುಚಿ ಚಂದ್ರು, ಭುವನೇಶ್ವರಿ ಹೆಗಡೆ, ಎಚ್.ಎಸ್.ವೆಂಕಟೇಶ್‌ ಮೂರ್ತಿಯವರು ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.13ರಂದು ನಡೆಯುವ ಭಾಷಣ ಸ್ಪರ್ಧೆಯ ಬಳಿಕ, ಅಂದು ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ. ಅಲ್ಲದೆ ಆಮಂತ್ರಣ ಪತ್ರಿಕೆಯಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಗೆ ‘ಸಮಾಜಸೇವಕ’ ಎಂಬ ವಿಶೇಷಣ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಪ್ಪ ಉಡಾಫೆ ಪ್ರತಿಕ್ರಿಯೆ

ಮೈಸೂರಿನಲ್ಲಿ ಬುಧವಾರ ಅಡ್ಡಂಡ ಕಾರ್ಯಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಪತ್ರಕರ್ತರ ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರಗಳನ್ನು ನೀಡಿಲ್ಲ. ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿರುವುದನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಅಡ್ಡಂಡ ಕಾರ್ಯಪ್ಪ ಅವರು ಉಡಾಫೆಯಿಂದ ಉತ್ತರಿಸಿದ್ದಾರೆ.

“ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದಾರೆ.

“ಜನರಿಗೆ ಇವರಿಂದ ಏನು ಸಂದೇಶ ಕೊಡುತ್ತೀರಿ?” ಎಂದು ಕೇಳಿದರೆ, “ಯುವಕರಿಗೆ ಸಂದೇಶವನ್ನು ಕೊಡುತ್ತೀವಿ” ಎಂದಿದ್ದಾರೆ. “ನಾವು ಚರ್ಚೆ ಮಾಡಿ ಒಂದಿಷ್ಟು ಜನರನ್ನು ಕರೆದಿದ್ದೇವೆ” ಎಂದು ಕಾರ್ಯಪ್ಪ ಪ್ರತಿಕ್ರಿಯೆ ನೀಡುತ್ತಾರೆ. “ಚಕ್ರವರ್ತಿ ಸೂಲಿಬೆಲೆಯವರು ರೈತರ ಬಗ್ಗೆ, ರಂಗಭೂಮಿ ಬಗ್ಗೆ ಯಾವತ್ತೂ ಮಾತನಾಡಲ್ಲ. ಯಾರೋ ಒಬ್ಬರನ್ನು ಒಲೈಸುತ್ತಾರೆ” ಎಂದು ಪತ್ರಕರ್ತರು ಕೇಳಿದರೆ, “ಮಾಧ್ಯಮದ ಕೆಲವರಿಗೆ ಹಾಗೆ ಅನ್ನಿಸಿರಬಹುದು, ಎಲ್ಲರಿಗೂ ಅಲ್ಲ” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿರಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು


ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗಲೂ ಹೀಗೆಯೇ ಉಡಾಫೆ ಉತ್ತರಗಳನ್ನೇ ನೀಡಿದರು. “ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ. ಅವರನ್ನು ಕರೆಸುವುದು ಎಷ್ಟು ಸರಿ? ಸಂಘಪರಿವಾರದ ವಿಚಾರಧಾರೆಗಳ ವ್ಯಕ್ತಿಗಳಾದರೂ ಎಲ್ಲ ಜನವರ್ಗವನ್ನು ಗೌರವಿಸುವ ಬಲಪಂಥೀಯರನ್ನು ಕರೆಸಬಹುದಲ್ಲ?” ಎಂದು ಕೇಳಿದೆವು. ನಮ್ಮ ಮಾಧ್ಯಮದ ಕುರಿತು ಲಘುವಾಗಿ ಮಾತನಾಡುತ್ತಲೇ ಉತ್ತರಿಸಿದ ಅವರು, “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದರೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವದ ವಿಷಯವನ್ನೇ ನಿರಾಕರಿಸಿದರು.

“ಸ್ವತಃ ಚಕ್ರವರ್ತಿ ಸೂಲಿಬೆಲೆಯವರೇ ತಾವು ಹೇಳಿರುವ ಮಾತುಗಳನ್ನು ಸತ್ಯವೆಂದು ಸಾಬೀತು ಮಾಡಲು ಸಾಧ್ಯವಾಗದಿರುವಾಗ, ನೀವು ಹೇಗೆ ಅವರು ಹೇಳುತ್ತಿರುವುದು ಸತ್ಯ ಎಂದು ಸಾಬೀತು ಮಾಡುತ್ತೀರಿ?” ಎಂದು ಕೇಳಿದೆವು. “ನಾನು ಅಷ್ಟು ಆಳಕ್ಕೆ ಇಳಿದಿಲ್ಲರ್‍ರೀ, ನೀವು ಆಳಕ್ಕೆ ಇಳಿದು ಏಕಮುಖ ವಿಚಾರಗಳನ್ನು ಬಿತ್ತುವ ಜನ್ಮದಲ್ಲಿ ಹುಟ್ಟಿದ್ದೀರಿ, ವಿವಾದ ಮಾಡಿಕೊಳ್ಳಿ” ಎಂದು ಹೇಳುತ್ತಾ ಮಾತುಮುಗಿಸಿದರು.


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...