Homeಮುಖಪುಟಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

- Advertisement -
- Advertisement -

ಬಲಪಂಥೀಯ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಘೋಷಣೆ ಕೂಗುತ್ತಾ ಯುವಕರಿಗೆ ದೊಣ್ಣೆಯಂತಹ ಆಯುಧವನ್ನು ಪರಸ್ಪರ ಹಂಚಿಕೊಳ್ಳುವ ತರಬೇತಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಕ್ರವರ್ತಿ ಸೂಲಿಬೆಲೆ ಕೈಯಿಂದ ಕೈಗೆ ಆಯುಧವನ್ನು ಹಸ್ತಾಂತರಿಸುವ ಯುವಕರಿಗೆ ಜೈ ಶಿವಾಜಿ, ಜೈ ಭವಾನಿ, ಭಾರತ್ ಮಾತಾಕೀ ಜೈ, ವಂದೇ ಮಾತರಂ, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇ‍ಷ ಹರಡುವುದನ್ನು ತಡೆಯುವುದಕ್ಕಾಗಿ ಕೆಲಸ ಮಾಡುತ್ತಿರುವ ಹೇಟ್ ಡಿಡೆಕ್ಟರ್ ಎಂಬ ಖಾತೆಯು ಆ ವಿಡಿಯೋವನ್ನು ಪೋಸ್ಟ್ ಮಾಡಿ “ಗೃಹ ಮಂತ್ರಿ ಆರಗ ಜ್ಞಾನೇಂದ್ರರವರೆ ಮತ್ತು ಕರ್ನಾಟಕದ ಡಿಜಿಪಿಗಳೇ, ಖಾಸಗಿ ಸೇನೆ ಕಟ್ಟು ತರಬೇತಿ ನೀಡುತ್ತಿರುವ ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸಿ ಸೂಕ್ರ ಕ್ರಮ ಕೈಗೊಳ್ಳಿ” ಎಂದು ಒತ್ತಾಯಿಸಿದೆ.

ಈ ರೀತಿ ಖಾಸಗಿ ಸೇನೆ ಕಟ್ಟಿ ಆಯುಧ ತರಬೇತಿ ನೀಡುವವರನ್ನು ಎನ್‌ಎಸ್‌ಎ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸಿ ಎಂದು ಟ್ವಿಟರ್‌ನಲ್ಲಿ ಆಗ್ರಹಿಸಿಲಾಗಿದೆ.

“ನೆನ್ನೆ ಕನ್ನಡತಿ ಮಲ್ಲಮ್ಮಳ ಹುಟ್ಟುಹಬ್ಬಕ್ಕೆ ಒಂದು ಶುಭಾಶಯ ಹೇಳೋಕೆ ಆಗ್ಲಿಲ್ಲ. ನೆರೆಪರಿಹಾರ,ರೈತರ ಸಮಸ್ಯೆಗಳು,ಯುವಕರಿಗೆ ಉದ್ಯೋಗ,ಆರೋಗ್ಯ ಶಿಕ್ಷಣ,ಜಿಎಸ್ಟಿ ವಾಪಸ್ ಇವುಗಳ ಬಗ್ಗೆ ಮಾತಡದ ಸೂಲಿಬೆಲೆಯವರು ಕನ್ನಡದ ಯುವಕರ ಕೈಗೆ ದೊಣ್ಣೆ ಕೊಟ್ಟು ಕರ್ನಾಟಕನಾ ಏನು ಮಾಡೋಕೆ ಹೊರಟಿದ್ದೀರ ರೀ. ದೊಣ್ಣೆ ಕೊಟ್ಟು ಕರ್ನಾಟಕ ಕಟ್ಟುವೀರಾ?” ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಒಂದು ಸಮುದಾಯವನ್ನು ಭಯೋತ್ಪಾದಕರೆಂದು ಚಿತ್ರೀಕರಿಸುತ್ತಾ ನಕಲಿ ದೇಶಪ್ರೇಮದ ನಾಟಕವಾಡಿ ಅಮಾಯಕ ಯುವಕರ ಕೈಗೆ ಬಂದೂಕು ಕೊಟ್ಟು ಚೆಲ್ಲಾಟವಾಡುತ್ತಿರುವ ಚಕ್ರವರ್ತಿ ಸೂಲಿಬೆಲೆ ಅನ್ನುವ ಗೂಂಡಾ ಮೇಲೆ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಯಾಕೆ ಜೈಲಿಗೆ ಅಟ್ಟಬಾರದು? ಎಂದು ಅಶ್ರಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಮರಾಠಿ ರಾಜನ ಗುಣಗಾನ ಮಾಡುತ್ತ ಆಯುಧ ಪ್ರದರ್ಶನೇ ಮಾಡ್ತಾ ಇದಾನೆ ಈ ದ್ರೋಹಿ. ಕಿತ್ತೂರು ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ, ರಾಯಣ್ಣ , ಮದಕರಿನಾಯಕ, ಪುಲಿಕೇಶೀ, ಶ್ರೀಕೃಷ್ಣದೇವರಾಯ, ಮೈಸೂರು ಅರಸರು ಇನ್ನು ಹಲವರಿಗೆ ಮಾಡುತ್ತಿರುವ ದ್ರೋಹ ಇದು ಈ ನಾಡ ದ್ರೋಹಿಯ ಬಂಧನ ಆಗಲೇಬೇಕು ಎಂದು ಚೇತನ್ ಕೃಷ್ಣರವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಕಳ್ಳತನದ ಆರೋಪ: ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ, ತಲೆ ಬೋಳಿಸಿ ಅವಮಾನಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನೂ ಕನ್ನಡಿಗನೆ ಆದರೆ ಇವರಂತೆ ನಕಲಿ ಕನ್ನಡಿಗನಲ್ಲ, ಕರ್ನಾಟಕ ದ ಇತಿಹಾಸ ಸರಿಯಾಗಿ ಓದಲಿ, ಇವರಿಗೆ ಕನ್ನಡ ದ ಹೆಸರಿನಲ್ಲಿ ಸೂಲಿಬೆಲೆಯವರ ಮೇಲೆ ಆರೋಪ ಹೊರಿಸಲು ಯಾವುದೇ ಅಧಿಕಾರವಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...