Homeಮುಖಪುಟಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

- Advertisement -
- Advertisement -

ಬಲಪಂಥೀಯ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಘೋಷಣೆ ಕೂಗುತ್ತಾ ಯುವಕರಿಗೆ ದೊಣ್ಣೆಯಂತಹ ಆಯುಧವನ್ನು ಪರಸ್ಪರ ಹಂಚಿಕೊಳ್ಳುವ ತರಬೇತಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಕ್ರವರ್ತಿ ಸೂಲಿಬೆಲೆ ಕೈಯಿಂದ ಕೈಗೆ ಆಯುಧವನ್ನು ಹಸ್ತಾಂತರಿಸುವ ಯುವಕರಿಗೆ ಜೈ ಶಿವಾಜಿ, ಜೈ ಭವಾನಿ, ಭಾರತ್ ಮಾತಾಕೀ ಜೈ, ವಂದೇ ಮಾತರಂ, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇ‍ಷ ಹರಡುವುದನ್ನು ತಡೆಯುವುದಕ್ಕಾಗಿ ಕೆಲಸ ಮಾಡುತ್ತಿರುವ ಹೇಟ್ ಡಿಡೆಕ್ಟರ್ ಎಂಬ ಖಾತೆಯು ಆ ವಿಡಿಯೋವನ್ನು ಪೋಸ್ಟ್ ಮಾಡಿ “ಗೃಹ ಮಂತ್ರಿ ಆರಗ ಜ್ಞಾನೇಂದ್ರರವರೆ ಮತ್ತು ಕರ್ನಾಟಕದ ಡಿಜಿಪಿಗಳೇ, ಖಾಸಗಿ ಸೇನೆ ಕಟ್ಟು ತರಬೇತಿ ನೀಡುತ್ತಿರುವ ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸಿ ಸೂಕ್ರ ಕ್ರಮ ಕೈಗೊಳ್ಳಿ” ಎಂದು ಒತ್ತಾಯಿಸಿದೆ.

ಈ ರೀತಿ ಖಾಸಗಿ ಸೇನೆ ಕಟ್ಟಿ ಆಯುಧ ತರಬೇತಿ ನೀಡುವವರನ್ನು ಎನ್‌ಎಸ್‌ಎ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸಿ ಎಂದು ಟ್ವಿಟರ್‌ನಲ್ಲಿ ಆಗ್ರಹಿಸಿಲಾಗಿದೆ.

“ನೆನ್ನೆ ಕನ್ನಡತಿ ಮಲ್ಲಮ್ಮಳ ಹುಟ್ಟುಹಬ್ಬಕ್ಕೆ ಒಂದು ಶುಭಾಶಯ ಹೇಳೋಕೆ ಆಗ್ಲಿಲ್ಲ. ನೆರೆಪರಿಹಾರ,ರೈತರ ಸಮಸ್ಯೆಗಳು,ಯುವಕರಿಗೆ ಉದ್ಯೋಗ,ಆರೋಗ್ಯ ಶಿಕ್ಷಣ,ಜಿಎಸ್ಟಿ ವಾಪಸ್ ಇವುಗಳ ಬಗ್ಗೆ ಮಾತಡದ ಸೂಲಿಬೆಲೆಯವರು ಕನ್ನಡದ ಯುವಕರ ಕೈಗೆ ದೊಣ್ಣೆ ಕೊಟ್ಟು ಕರ್ನಾಟಕನಾ ಏನು ಮಾಡೋಕೆ ಹೊರಟಿದ್ದೀರ ರೀ. ದೊಣ್ಣೆ ಕೊಟ್ಟು ಕರ್ನಾಟಕ ಕಟ್ಟುವೀರಾ?” ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಒಂದು ಸಮುದಾಯವನ್ನು ಭಯೋತ್ಪಾದಕರೆಂದು ಚಿತ್ರೀಕರಿಸುತ್ತಾ ನಕಲಿ ದೇಶಪ್ರೇಮದ ನಾಟಕವಾಡಿ ಅಮಾಯಕ ಯುವಕರ ಕೈಗೆ ಬಂದೂಕು ಕೊಟ್ಟು ಚೆಲ್ಲಾಟವಾಡುತ್ತಿರುವ ಚಕ್ರವರ್ತಿ ಸೂಲಿಬೆಲೆ ಅನ್ನುವ ಗೂಂಡಾ ಮೇಲೆ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಯಾಕೆ ಜೈಲಿಗೆ ಅಟ್ಟಬಾರದು? ಎಂದು ಅಶ್ರಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಮರಾಠಿ ರಾಜನ ಗುಣಗಾನ ಮಾಡುತ್ತ ಆಯುಧ ಪ್ರದರ್ಶನೇ ಮಾಡ್ತಾ ಇದಾನೆ ಈ ದ್ರೋಹಿ. ಕಿತ್ತೂರು ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ, ರಾಯಣ್ಣ , ಮದಕರಿನಾಯಕ, ಪುಲಿಕೇಶೀ, ಶ್ರೀಕೃಷ್ಣದೇವರಾಯ, ಮೈಸೂರು ಅರಸರು ಇನ್ನು ಹಲವರಿಗೆ ಮಾಡುತ್ತಿರುವ ದ್ರೋಹ ಇದು ಈ ನಾಡ ದ್ರೋಹಿಯ ಬಂಧನ ಆಗಲೇಬೇಕು ಎಂದು ಚೇತನ್ ಕೃಷ್ಣರವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಕಳ್ಳತನದ ಆರೋಪ: ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ, ತಲೆ ಬೋಳಿಸಿ ಅವಮಾನಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನೂ ಕನ್ನಡಿಗನೆ ಆದರೆ ಇವರಂತೆ ನಕಲಿ ಕನ್ನಡಿಗನಲ್ಲ, ಕರ್ನಾಟಕ ದ ಇತಿಹಾಸ ಸರಿಯಾಗಿ ಓದಲಿ, ಇವರಿಗೆ ಕನ್ನಡ ದ ಹೆಸರಿನಲ್ಲಿ ಸೂಲಿಬೆಲೆಯವರ ಮೇಲೆ ಆರೋಪ ಹೊರಿಸಲು ಯಾವುದೇ ಅಧಿಕಾರವಿಲ್ಲ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...