Homeಕರ್ನಾಟಕಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಎನ್ನುವ ಅವರು, ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ಕರ್ನಾಟಕದ ಜನತೆಗೆ ಗೊತ್ತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್‌ ನೀಡಿರುವ ಕುರಿತು ಉಡುಪಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಚಕ್ರವರ್ತಿ ಸೂಲಿಬೆಲೆ ಕಪ್ಪಿಗಿರೋದನ್ನು ಬೆಳ್ಳಗೆ ಮಾಡೋದರಲ್ಲಿ, ಬೆಳ್ಳಗಿರುವುದನ್ನು ಕಪ್ಪಗೆ ಮಾಡೋದರಲ್ಲಿ ಬಹಳಷ್ಟು ನಿಸ್ಸೀಮರು” ಎಂದು ವಾಗ್ದಾಳಿ ನಡೆಸಿದ್ದಾರೆ.

ವಾಕ್‌ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಾಕ್‌ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯ ಇದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ನಾವು ಚಕ್ರವರ್ತಿ ಸೂಲಿಬೆಲೆಯಿಂದ ಪಾಠ ಕೇಳಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರು ಮೂರು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾರೆ ಎಂಬುವುದರ ಬಗ್ಗೆ ನನಗೆ ಮಾಹಿತಿಯಿದೆ. ಎಸ್ಪಿ ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದಾರೆ. ಅವರು (ಸೂಲಿಬೆಲೆ) ತಮ್ಮ ಪ್ರವಾಸ ಮಾಡಲಿ. ಆದರೆ, ಕೋಮು ಸೌಹಾರ್ದತೆ ಕೆಡಿಸುವುದು, ಸುಳ್ಳು-ದ್ವೇಷ ಬಿತ್ತುವುದನ್ನು ಅವರು ಮಾಡಬಾರದು. ಏಕೆಂದರೆ, ಉಡುಪಿ ಜಿಲ್ಲೆಯ ಜನ ಶಾಂತಿ ಪ್ರಿಯರು ಎಂದಿದ್ದಾರೆ.

ಕೋಮು ನಿಗ್ರಹ ದಳಕ್ಕೆ ಉಡುಪಿಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಒಂದು ಕಡೆ ಕೋಮುವಾದಕ್ಕೆ ಪ್ರಚೋದನೆ ಮಾಡಿಕೊಂಡು ನಾವು ಮಾಡುತ್ತಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ಕೋಮು ದ್ವೇಷ ನಿಗ್ರಹ ದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಬಿಜೆಪಿ ಶಾಸಕರ ಈ ನಡವಳಿಕೆ ನೋಡಿ, ಅವರ ಮನಸ್ಥಿತಿ ಏನು ಎಂಬುವುದನ್ನು ಉಡುಪಿಯ ಜನರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂ.20ರಿಂದ 22ರವರೆಗೆ ‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಆಯೋಜಕರಿಗೆ 14 ಅಂಶಗಳ ಸೂಚನೆಗಳನ್ನು ನೀಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...