Homeಕರ್ನಾಟಕಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

- Advertisement -
- Advertisement -

ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಅವರಿಗೆ ಬುದ್ದಿವಾದ ಹೇಳಿದ್ದಾರೆ.

ಮಂಗಳವಾರದಂದು ದೇಶದಾದ್ಯಂತ ಪ್ರವಾದಿ ಮೊಹಮ್ಮದರ ಹುಟ್ಟು ಹಬ್ಬವನ್ನು (ಈದ್‌ ಮಿಲಾದ್‌) ಆಚರಿಸಲಾಗಿತ್ತು. ಈ ಆಚರಣೆಯ ವೇಳೆ ಸಾಮಾನ್ಯವಾಗಿ ಮೆರವಣಿಗೆಯನ್ನು ನಡೆಸಲಾಗುತ್ತದೆ. ಇಂತಹದ್ದೇ ಮೆರವಣಿಗೆಯ ವಿಡಿಯೊವೊಂದನ್ನು ಸೂಲಿಬೆಲೆ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ವಿಡಿಯೊದಲ್ಲಿ, ಜನರು ಮೆರವಣಿಗೆ ಹೊರಟಿದ್ದು, ಅದರಲ್ಲಿ ಸಾಧಾರಣವಾಗಿ ಈದ್‌ ಮಿಲಾದ್‌ ದಿನ ಬಳಸುವ ಹಸಿರು ಧ್ವಜವನ್ನು ಬಳಸಲಾಗಿದೆ. ಅದರಲ್ಲಿ ಯಾವುದೇ ಸಂಘಟನೆಯದ್ದೋ, ಪಕ್ಷದ್ದೋ ಧ್ವಜ ಇರಲಿಲ್ಲ. ಮೆರವಣಿಗೆಯ ಪಕ್ಕದಲ್ಲೇ ಇಬ್ಬರು ಪುಟ್ಟ ಮಕ್ಕಳು ಕೇಸರಿ ಧ್ವಜವನ್ನು ಬೀಸಿಕೊಂಡು ಸೈಕಲ್ ಹೊರಡುತ್ತಾರೆ. ಅವರಿಗೆ ಯಾರು ಕೂಡಾ ತೊಂದರೆ ಮಾಡುವುದಿಲ್ಲ, ಜೊತೆಗೆ ಮಕ್ಕಳಿಬ್ಬರು ಸಹಜವಾಗಿ ಧ್ವಜಗಳನ್ನು ಬೀಸಿಕೊಂಡು ಹೋಗುತ್ತಾರೆ.

ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ, “ತುಂಬಾ ಜನರಿದ್ದಾರೆ ಎಂದು ಹೆದರಬೇಡಿ. ಕುರಿಗಳು ಗುಂಪಿನಲ್ಲಿ‌ ಹೋಗುತ್ತವೆ, ಸಿಂಹ ಏಕಾಂಗಿಯಾಗಿ ನಡೆಯುತ್ತದೆ” ಎಂದು ಬರೆದಿದ್ದಾರೆ. ಇಲ್ಲಿ ಮೆರವಣಿಗೆ ಹೊರಟಿರುವ ಜನರನ್ನು ಅವರು ಹಂಗಿಸಿ ಬರೆದಿದ್ದಾರೆ.

ಅವರ ಪೋಸ್ಟ್‌ಗೆ ಟ್ವಿಟರ್‌ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಬುದ್ದಿವಾದ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಭಾಸ್ಕರ್‌ ರಾವ್ ಅವರು, “ಬಡ ಮುಗ್ಧ ಮಕ್ಕಳನ್ನು ಪ್ರಚೋದನೆಗೆ ಬಳಸಬಾರದು. ನೀವು ಯಾವ ಸಂದೇಶವನ್ನು ಹೇಳಲು ಬಯಸುತ್ತಿದ್ದೀರಿ.ನೀವೊಬ್ಬರು ಐಕಾನ್ ಆಗಿದ್ದು, ದಯವಿಟ್ಟು ಧನಾತ್ಮಕ ಪದಗಳನ್ನು ಬಳಸಿ” ಎಂದು ಹೇಳಿದ್ದಾರೆ.

ಭಾಸ್ಕರ್‌ ರಾಮ್ ಅವರ ರೀಟ್ವೀಟ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆಯಾದರೂ, ಸೂಲಿಬೆಲೆ ಅವರನ್ನು ‘ಐಕಾನ್’ ಎಂದು ಸಂಬೋಧಿಸಿದ್ದಕ್ಕೆ ಆಕ್ಷೇಪ ಕೂಡಾ ವ್ಯಕ್ತವಾಗಿದೆ.

ಇದನ್ನೂ ಓದಿ: ನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ಹರೀಶ್ ಎನ್ನುವವರು, “ಮಾನ್ಯ ಭಾಸ್ಕರ್ ರಾವ್ ಸರ್, ನಿಮ್ಮ ಮೇಲೆ ಹಾಗೂ ನಿಮ್ಮ ಕರ್ತವ್ಯ ನಿಷ್ಠೆ ಮೇಲೆ ನಮಗೆ ಅಪಾರ ಗೌರವವಿದೆ. ದಯವಿಟ್ಟು ಇಂಥವರನ್ನು ICON ಎಂದು ಸಂಭೋದಿಸ ಬೇಡಿ. ಸುಳ್ಳೇ ಅವರ ಸರ್ವಸ್ವ. ಮಾರದಿಗಾಗಿ ಒಂದು ವಿಡಿಯೋ ಹಾಕಿದ್ದೇನೆ ನೋಡಿ ಆನಂದಿಸಿ. ಮತ್ತಷ್ಟು ವಿಡಿಯೋಗಳಿಗಾಗಿ ಹೆಂಗ್ ಪುಂಗ್ಲಿ ವೀಡಿಯೋಸ್ ಎಂದು ಸರ್ಚ್ ಮಾಡಿ ನೋಡಿ ಆನಂದಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...