Homeಕರ್ನಾಟಕಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

- Advertisement -
- Advertisement -

ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಅವರಿಗೆ ಬುದ್ದಿವಾದ ಹೇಳಿದ್ದಾರೆ.

ಮಂಗಳವಾರದಂದು ದೇಶದಾದ್ಯಂತ ಪ್ರವಾದಿ ಮೊಹಮ್ಮದರ ಹುಟ್ಟು ಹಬ್ಬವನ್ನು (ಈದ್‌ ಮಿಲಾದ್‌) ಆಚರಿಸಲಾಗಿತ್ತು. ಈ ಆಚರಣೆಯ ವೇಳೆ ಸಾಮಾನ್ಯವಾಗಿ ಮೆರವಣಿಗೆಯನ್ನು ನಡೆಸಲಾಗುತ್ತದೆ. ಇಂತಹದ್ದೇ ಮೆರವಣಿಗೆಯ ವಿಡಿಯೊವೊಂದನ್ನು ಸೂಲಿಬೆಲೆ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ವಿಡಿಯೊದಲ್ಲಿ, ಜನರು ಮೆರವಣಿಗೆ ಹೊರಟಿದ್ದು, ಅದರಲ್ಲಿ ಸಾಧಾರಣವಾಗಿ ಈದ್‌ ಮಿಲಾದ್‌ ದಿನ ಬಳಸುವ ಹಸಿರು ಧ್ವಜವನ್ನು ಬಳಸಲಾಗಿದೆ. ಅದರಲ್ಲಿ ಯಾವುದೇ ಸಂಘಟನೆಯದ್ದೋ, ಪಕ್ಷದ್ದೋ ಧ್ವಜ ಇರಲಿಲ್ಲ. ಮೆರವಣಿಗೆಯ ಪಕ್ಕದಲ್ಲೇ ಇಬ್ಬರು ಪುಟ್ಟ ಮಕ್ಕಳು ಕೇಸರಿ ಧ್ವಜವನ್ನು ಬೀಸಿಕೊಂಡು ಸೈಕಲ್ ಹೊರಡುತ್ತಾರೆ. ಅವರಿಗೆ ಯಾರು ಕೂಡಾ ತೊಂದರೆ ಮಾಡುವುದಿಲ್ಲ, ಜೊತೆಗೆ ಮಕ್ಕಳಿಬ್ಬರು ಸಹಜವಾಗಿ ಧ್ವಜಗಳನ್ನು ಬೀಸಿಕೊಂಡು ಹೋಗುತ್ತಾರೆ.

ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ, “ತುಂಬಾ ಜನರಿದ್ದಾರೆ ಎಂದು ಹೆದರಬೇಡಿ. ಕುರಿಗಳು ಗುಂಪಿನಲ್ಲಿ‌ ಹೋಗುತ್ತವೆ, ಸಿಂಹ ಏಕಾಂಗಿಯಾಗಿ ನಡೆಯುತ್ತದೆ” ಎಂದು ಬರೆದಿದ್ದಾರೆ. ಇಲ್ಲಿ ಮೆರವಣಿಗೆ ಹೊರಟಿರುವ ಜನರನ್ನು ಅವರು ಹಂಗಿಸಿ ಬರೆದಿದ್ದಾರೆ.

ಅವರ ಪೋಸ್ಟ್‌ಗೆ ಟ್ವಿಟರ್‌ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಬುದ್ದಿವಾದ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಭಾಸ್ಕರ್‌ ರಾವ್ ಅವರು, “ಬಡ ಮುಗ್ಧ ಮಕ್ಕಳನ್ನು ಪ್ರಚೋದನೆಗೆ ಬಳಸಬಾರದು. ನೀವು ಯಾವ ಸಂದೇಶವನ್ನು ಹೇಳಲು ಬಯಸುತ್ತಿದ್ದೀರಿ.ನೀವೊಬ್ಬರು ಐಕಾನ್ ಆಗಿದ್ದು, ದಯವಿಟ್ಟು ಧನಾತ್ಮಕ ಪದಗಳನ್ನು ಬಳಸಿ” ಎಂದು ಹೇಳಿದ್ದಾರೆ.

ಭಾಸ್ಕರ್‌ ರಾಮ್ ಅವರ ರೀಟ್ವೀಟ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆಯಾದರೂ, ಸೂಲಿಬೆಲೆ ಅವರನ್ನು ‘ಐಕಾನ್’ ಎಂದು ಸಂಬೋಧಿಸಿದ್ದಕ್ಕೆ ಆಕ್ಷೇಪ ಕೂಡಾ ವ್ಯಕ್ತವಾಗಿದೆ.

ಇದನ್ನೂ ಓದಿ: ನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ಹರೀಶ್ ಎನ್ನುವವರು, “ಮಾನ್ಯ ಭಾಸ್ಕರ್ ರಾವ್ ಸರ್, ನಿಮ್ಮ ಮೇಲೆ ಹಾಗೂ ನಿಮ್ಮ ಕರ್ತವ್ಯ ನಿಷ್ಠೆ ಮೇಲೆ ನಮಗೆ ಅಪಾರ ಗೌರವವಿದೆ. ದಯವಿಟ್ಟು ಇಂಥವರನ್ನು ICON ಎಂದು ಸಂಭೋದಿಸ ಬೇಡಿ. ಸುಳ್ಳೇ ಅವರ ಸರ್ವಸ್ವ. ಮಾರದಿಗಾಗಿ ಒಂದು ವಿಡಿಯೋ ಹಾಕಿದ್ದೇನೆ ನೋಡಿ ಆನಂದಿಸಿ. ಮತ್ತಷ್ಟು ವಿಡಿಯೋಗಳಿಗಾಗಿ ಹೆಂಗ್ ಪುಂಗ್ಲಿ ವೀಡಿಯೋಸ್ ಎಂದು ಸರ್ಚ್ ಮಾಡಿ ನೋಡಿ ಆನಂದಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...