Homeಮುಖಪುಟಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಚಕ್ರವರ್ತಿ ಸೂಲಿಬೆಲೆ ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿರುವ ಪ್ರಸಂಗ ಜರುಗಿದೆ.

ಶಾಸಕ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಚಕ್ರವರ್ತಿ ಸೂಲಿಬೆಲೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಟ್ವೀಟ್ ಮಾಡಿದ್ದರು.

ಇದಕ್ಕೆ ಅಲ್ಲಿಯೇ ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೀರ್ತನ್ ಕೃಷ್ಣ ಎಂಬುವವರು, “ಆ ಸಿನಿಮಾ ನಟ ನೀನು ಸಪೋರ್ಟ್ ಮಾಡೋ ರಾಜಕೀಯ ವ್ಯಕ್ತಿ ಹಾಗು ಪಕ್ಷಕ್ಕಿಂತ ಹೆಚ್ಚು ಸೇವೆ ಜನರಿಗೆ ಸಲ್ಲಿಸಿದ್ದಾರೆ. ನಿನ್ನ ರೀತಿ ಜನರ ಮದ್ಯೆ ದ್ವೇಷ ತಂದಿಡುವ ಕೆಲಸ ಯಾವತ್ತು ಮಾಡಿಲ್ಲಾ. ಅಪ್ಪು ಹೆಸರೆತ್ತೋ ಯೋಗ್ಯತೆ ನಿನಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಬೇಕಾದ್ರೆ ಅಯೋಗ್ಯ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಜೀವಪ್ಪ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ಪು ಅಭಿಮಾನಿಗಳು ತಿರುಗಿಬಿದ್ದಾಗ ಎಚ್ಚೆತ್ತುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಯಾಚಿಸಿದ್ದಾರೆ. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಎರಡೆರಡು ಬಾರಿ ಕ್ಷಮೆ ಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ: ದಲಿತರನ್ನು ‘ಪಾತಕಿ’ಗಳಂತೆ ತೋರಿಸಿದ್ದು ಏತಕ್ಕಾಗಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...