Homeಮುಖಪುಟಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಚಕ್ರವರ್ತಿ ಸೂಲಿಬೆಲೆ ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿರುವ ಪ್ರಸಂಗ ಜರುಗಿದೆ.

ಶಾಸಕ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಚಕ್ರವರ್ತಿ ಸೂಲಿಬೆಲೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಟ್ವೀಟ್ ಮಾಡಿದ್ದರು.

ಇದಕ್ಕೆ ಅಲ್ಲಿಯೇ ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೀರ್ತನ್ ಕೃಷ್ಣ ಎಂಬುವವರು, “ಆ ಸಿನಿಮಾ ನಟ ನೀನು ಸಪೋರ್ಟ್ ಮಾಡೋ ರಾಜಕೀಯ ವ್ಯಕ್ತಿ ಹಾಗು ಪಕ್ಷಕ್ಕಿಂತ ಹೆಚ್ಚು ಸೇವೆ ಜನರಿಗೆ ಸಲ್ಲಿಸಿದ್ದಾರೆ. ನಿನ್ನ ರೀತಿ ಜನರ ಮದ್ಯೆ ದ್ವೇಷ ತಂದಿಡುವ ಕೆಲಸ ಯಾವತ್ತು ಮಾಡಿಲ್ಲಾ. ಅಪ್ಪು ಹೆಸರೆತ್ತೋ ಯೋಗ್ಯತೆ ನಿನಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಬೇಕಾದ್ರೆ ಅಯೋಗ್ಯ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಜೀವಪ್ಪ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ಪು ಅಭಿಮಾನಿಗಳು ತಿರುಗಿಬಿದ್ದಾಗ ಎಚ್ಚೆತ್ತುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಯಾಚಿಸಿದ್ದಾರೆ. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಎರಡೆರಡು ಬಾರಿ ಕ್ಷಮೆ ಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ: ದಲಿತರನ್ನು ‘ಪಾತಕಿ’ಗಳಂತೆ ತೋರಿಸಿದ್ದು ಏತಕ್ಕಾಗಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....