Homeಮುಖಪುಟಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಚಕ್ರವರ್ತಿ ಸೂಲಿಬೆಲೆ ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿರುವ ಪ್ರಸಂಗ ಜರುಗಿದೆ.

ಶಾಸಕ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಚಕ್ರವರ್ತಿ ಸೂಲಿಬೆಲೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಟ್ವೀಟ್ ಮಾಡಿದ್ದರು.

ಇದಕ್ಕೆ ಅಲ್ಲಿಯೇ ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೀರ್ತನ್ ಕೃಷ್ಣ ಎಂಬುವವರು, “ಆ ಸಿನಿಮಾ ನಟ ನೀನು ಸಪೋರ್ಟ್ ಮಾಡೋ ರಾಜಕೀಯ ವ್ಯಕ್ತಿ ಹಾಗು ಪಕ್ಷಕ್ಕಿಂತ ಹೆಚ್ಚು ಸೇವೆ ಜನರಿಗೆ ಸಲ್ಲಿಸಿದ್ದಾರೆ. ನಿನ್ನ ರೀತಿ ಜನರ ಮದ್ಯೆ ದ್ವೇಷ ತಂದಿಡುವ ಕೆಲಸ ಯಾವತ್ತು ಮಾಡಿಲ್ಲಾ. ಅಪ್ಪು ಹೆಸರೆತ್ತೋ ಯೋಗ್ಯತೆ ನಿನಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಬೇಕಾದ್ರೆ ಅಯೋಗ್ಯ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಜೀವಪ್ಪ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ಪು ಅಭಿಮಾನಿಗಳು ತಿರುಗಿಬಿದ್ದಾಗ ಎಚ್ಚೆತ್ತುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಯಾಚಿಸಿದ್ದಾರೆ. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಎರಡೆರಡು ಬಾರಿ ಕ್ಷಮೆ ಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ: ದಲಿತರನ್ನು ‘ಪಾತಕಿ’ಗಳಂತೆ ತೋರಿಸಿದ್ದು ಏತಕ್ಕಾಗಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....