Homeಮುಖಪುಟಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಚಕ್ರವರ್ತಿ ಸೂಲಿಬೆಲೆ ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿರುವ ಪ್ರಸಂಗ ಜರುಗಿದೆ.

ಶಾಸಕ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಚಕ್ರವರ್ತಿ ಸೂಲಿಬೆಲೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಟ್ವೀಟ್ ಮಾಡಿದ್ದರು.

ಇದಕ್ಕೆ ಅಲ್ಲಿಯೇ ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೀರ್ತನ್ ಕೃಷ್ಣ ಎಂಬುವವರು, “ಆ ಸಿನಿಮಾ ನಟ ನೀನು ಸಪೋರ್ಟ್ ಮಾಡೋ ರಾಜಕೀಯ ವ್ಯಕ್ತಿ ಹಾಗು ಪಕ್ಷಕ್ಕಿಂತ ಹೆಚ್ಚು ಸೇವೆ ಜನರಿಗೆ ಸಲ್ಲಿಸಿದ್ದಾರೆ. ನಿನ್ನ ರೀತಿ ಜನರ ಮದ್ಯೆ ದ್ವೇಷ ತಂದಿಡುವ ಕೆಲಸ ಯಾವತ್ತು ಮಾಡಿಲ್ಲಾ. ಅಪ್ಪು ಹೆಸರೆತ್ತೋ ಯೋಗ್ಯತೆ ನಿನಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಬೇಕಾದ್ರೆ ಅಯೋಗ್ಯ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಜೀವಪ್ಪ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ಪು ಅಭಿಮಾನಿಗಳು ತಿರುಗಿಬಿದ್ದಾಗ ಎಚ್ಚೆತ್ತುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಯಾಚಿಸಿದ್ದಾರೆ. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಎರಡೆರಡು ಬಾರಿ ಕ್ಷಮೆ ಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ: ದಲಿತರನ್ನು ‘ಪಾತಕಿ’ಗಳಂತೆ ತೋರಿಸಿದ್ದು ಏತಕ್ಕಾಗಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...