Homeಮುಖಪುಟಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶದ ನಂತರ ಕ್ಷಮೆಯಾಚನೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಚಕ್ರವರ್ತಿ ಸೂಲಿಬೆಲೆ ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿರುವ ಪ್ರಸಂಗ ಜರುಗಿದೆ.

ಶಾಸಕ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ ಚಕ್ರವರ್ತಿ ಸೂಲಿಬೆಲೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಟ್ವೀಟ್ ಮಾಡಿದ್ದರು.

ಇದಕ್ಕೆ ಅಲ್ಲಿಯೇ ಬಹಳಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೀರ್ತನ್ ಕೃಷ್ಣ ಎಂಬುವವರು, “ಆ ಸಿನಿಮಾ ನಟ ನೀನು ಸಪೋರ್ಟ್ ಮಾಡೋ ರಾಜಕೀಯ ವ್ಯಕ್ತಿ ಹಾಗು ಪಕ್ಷಕ್ಕಿಂತ ಹೆಚ್ಚು ಸೇವೆ ಜನರಿಗೆ ಸಲ್ಲಿಸಿದ್ದಾರೆ. ನಿನ್ನ ರೀತಿ ಜನರ ಮದ್ಯೆ ದ್ವೇಷ ತಂದಿಡುವ ಕೆಲಸ ಯಾವತ್ತು ಮಾಡಿಲ್ಲಾ. ಅಪ್ಪು ಹೆಸರೆತ್ತೋ ಯೋಗ್ಯತೆ ನಿನಗಿಲ್ಲ” ಎಂದು ಕಿಡಿಕಾರಿದ್ದಾರೆ.

“ಬೇಕಾದ್ರೆ ಅಯೋಗ್ಯ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಜೀವಪ್ಪ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ಪು ಅಭಿಮಾನಿಗಳು ತಿರುಗಿಬಿದ್ದಾಗ ಎಚ್ಚೆತ್ತುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಕ್ಷಮೆ ಯಾಚಿಸಿದ್ದಾರೆ. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಎರಡೆರಡು ಬಾರಿ ಕ್ಷಮೆ ಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ: ದಲಿತರನ್ನು ‘ಪಾತಕಿ’ಗಳಂತೆ ತೋರಿಸಿದ್ದು ಏತಕ್ಕಾಗಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...