Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...