Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...