Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....