Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...