Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...