Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...