Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...