Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...