Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...