Homeಮುಖಪುಟದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ದರ್ಶನ್ ಬರ್ತಡೇ ಪಾರ್ಟಿ v/s ಫ್ಯಾನ್ಸ್ ಕಿರಿಕ್ ಪಾರ್ಟಿ

ಆದರ್ಶವಾಗ ಬೇಕಿದ್ದ ಸಂಭ್ರಮ ಕಿರಿಕ್ ಪಾರ್ಟಿಯಾಗಿದ್ದಾದರೂ ಯಾಕೆ?

- Advertisement -
- Advertisement -

ಸಿನಿಮಾ ಸ್ಟಾರ್‌ಗಳ ಹುಟ್ಟಿದ ದಿನವನ್ನು ಅಭಿಮಾನಿಗಳು ಅದ್ದೂರಿ ಸಂಭ್ರಮದಿಂದ ಆಚರಿಸುವುದು ಕಳೆದೆರಡು ದಶಕದಿಂದ ಸಾಮಾನ್ಯವಾಗಿರುವ ಸಂಗತಿ. ಅದರಲ್ಲಿ ಹಲವು ಸ್ಟಾರ್‌ಗಳು ತಮ್ಮ ಬರ್ತಡೆಯನ್ನು ಅದ್ದೂರಿಯಾಗಿ ಮಾಡಿಕೊಂಡರೆ, ಕೆಲವರು ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟು ತಮ್ಮ ಬರ್ತಡೇಯನ್ನು ಆಚರಿಸಿಕೊಳ್ಳುವುದಿಲ್ಲವೆಂದು ಘೋಷಿಸುವ, ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವಂತಹದ್ದನ್ನು ಮಾಡಿದ್ದಾರೆ. ಈ ಎಲ್ಲದರ ನಡುವೆ ವಿಶೇಷವಾಗಿದ್ದು ದರ್ಶನ್ ಹುಟ್ಟಿದ ದಿನದ ಆಚರಣೆ.

ದರ್ಶನ್ ತನ್ನ ಹುಟ್ಟಿದ ಹಬ್ಬದ ಒಂದು ತಿಂಗಳ ಮುಂಚೆಯೇ ಮನೆಮುಂದೆ “ಯಾರೂ ಹಾರತುರಾಯಿ ತರಬೇಡಿ, ಬದಲಾಗಿ ತಮ್ಮ ಕೈಲ್ಟಾದಷ್ಟು ದಿನಸಿ ಸಾಮಗ್ರಿಗಳನ್ನು ತಂದುಕೊಡಿ” ಎಂದು ಅಭಿಮಾನಿಗಳಿಗೆ ಮನವಿ ಮಾಡಿ ಬ್ಯಾನರ್ ಹಾಕಿದ್ದರು.

ಅದರಂತೆಯೇ ಅಭಿಮಾನಿಗಳು ಸಾಕಷ್ಟು ದಿನಸಿಗಳನ್ನು ತಂದು ದರ್ಶನ್ ಮನೆ ತುಂಬಿಸಿದ್ದರು. ಅಲ್ಲದೆ ಮೈಸೂರಿನ ಅಭಿಮಾನಿಗಳು ಹತ್ತಾರು ಮರಗಳಿಗೆ ಎರಡೆರಡು ಲೋಟಗಳನ್ನು ನೇತುಹಾಕಿ ಒಂದು ಲೋಟಕ್ಕೆ ನೀರನ್ನು, ಮತ್ತೊಂದು ಲೋಟಕ್ಕೆ ಆಹಾರವನ್ನು ಹಾಕಿ ದರ್ಶನ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿ ಅಂಗಳದಲ್ಲಿ ಕೇಜಿಗಟ್ಟಲೆ ಕೇಕ್ ಕಟ್ ಮಾಡಿ ಕುಣಿದು ಕುಪ್ಪಳಿಸುವ ಸಿನಿಮಾ ಸ್ಟಾರ್‍ಗಳಿಗೆ ದರ್ಶನ್ ಹುಟ್ಟಿದ ಹಬ್ಬದ ಸಂಭ್ರಮ ಆದರ್ಶವಾಗಬೇಕು.

ಆದರೆ, ಈಗ ದರ್ಶನ್ ಬರ್ತಡೇ ಸಂಭ್ರಮ ಆದರ್ಶದ ಸುದ್ದಿಗಿಂತ ಕಿರಿಕ್ ಪಾರ್ಟಿಯ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ. ಅಂತದ್ದೇನಾಯಿತು ಎಂದರೆ, ದರ್ಶನ್ ಬರ್ತಡೇಗೆ ಸ್ಯಾಂಡಲ್‍ವುಡ್‍ನ ಎಲ್ಲಾ ಸ್ಟಾರ್‍ಗಳು ವಿಶ್ ಮಾಡಿದ್ದರು. ಅದರಲ್ಲಿ ಪುನೀತ್ ಕೂಡ ‘ಹ್ಯಾಪಿ ಬರ್ತಡೇ ದರ್ಶನ್’ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ‘ಥ್ಯಾಂಕ್ಸ್ ಸರ್, ಡಿ ಬಾಸ್ ರೇಂಜ್‍ಗೆ ನೀವು ಬೆಳೆಯಬೇಕು’ ಎಂದು ‘ಡಿ ಬಾಸ್ ಕ್ರೇಜ್ ಕಾ ಬಾಪ್’ ಎನ್ನುವ ಟ್ವಿಟರ್ ಅಕೌಂಟ್‍ನಿಂದ ದರ್ಶನ್ ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.

ಈ ಪ್ರತಿಕ್ರಿಯೆ ಪುನೀತ್ ಅಭಿಮಾನಿಗಳನ್ನು ಸಿಟ್ಟಿಗೇರಿಸಿದೆ. ಪುನೀತ್ ಅಭಿಮಾನಿಗಳು ಪುನೀತ್ ರೇಂಜ್ ಎಲ್ಲರಿಗಿಂತ ಮೇಲಿದೆ, ಅವರು 08ನೇ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಪುನೀತ್ ರೇಂಜ್‍ಗೆ ಬೆಳಿಬೇಕಿರೋದು ದರ್ಶನ್ ಎಂದು ವಾದಕ್ಕಿಳಿದಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಹಸಿ-ಹುಸಿ ಕೋಪ-ತಾಪಗಳಿದ್ದರೂ ಒಂದು ಮಟ್ಟಕ್ಕೆ ಎಲ್ಲರೂ ಚೆನ್ನಾಗಿಯೇ ಇದ್ದಾರೆ. ಆದರೆ ಈ ಅಭಿಮಾನಿಗಳ ಹುಚ್ಚಾಟದಿಂದ ಬೂದಿಮುಚ್ಚಿದ ಕೆಂಡದಂತಿರುವ ಸ್ಟಾರ್‌ಗಳ ಶೀತಲ ಸಮರದ ಬೆಂಕಿಗೆ ತುಪ್ಪಸುರಿದಂತಾಗುತ್ತಿದೆ.

ಇದಲ್ಲದೆ, ದರ್ಶನ್ ಬರ್ತಡೇ ದಿನ ಅವರ ಮನೆಮುಂದೆ ಜಮಾಯಿಸಿದ್ದ ಅಭಿಮಾನಿಗಳು ಅಲ್ಲೂ ಇಲ್ಲಸಲ್ಲದ ಕಿತಾಪತಿ ಮಾಡಿ ದರ್ಶನ್ ಮನೆಯ ನೆರೆಹೊರೆಯವರು ದರ್ಶನ್‍ಗೆ ಹಿಡಿಶಾಪ ಹಾಕುವಂತೆ ಮಾಡಿದ್ದಾರೆ. ಬರ್ತಡೇ ಸೆಲೆಬ್ರೆಷನ್‍ಗೆ ಬಂದಿದ್ದ ಫ್ಯಾನ್‍ಗಳು ಪಕ್ಕ-ಪಕ್ಕದ ಮನೆಯ ಹಲವಾರು ವಸ್ತುಗಳನ್ನು ಹಾಳುಗೆಡವಿ ಹೋಗಿದ್ದಾರೆ. ಅದು ಯಾವ ರೇಂಜಿಗೆಂದರೆ ಪಕ್ಕದ ಮನೆಯ ಬಳಿ ನಿಂತಿದ್ದ ಕಾರಿನ ಮೇಲೆ ಹತ್ತಿ, ಕುಳಿದುಕುಪ್ಪಳಿಸಿ ಕಾರಿನ ಮೇಲೆಲ್ಲಾ ಗೀಚಿ ಕಾರು ಗುಜರಿ ಸೇರುವ ಹಂತಕ್ಕೆ ಹಾಳು ಮಾಡಿ ಹೋಗಿದ್ದಾರೆ.

ಇದರಿಂದಾಗಿ ನೆರೆಹೊರೆಯವರು ದರ್ಶನ್ ಬರ್ತಡೇ ಮ್ಯಾನೇಜ್‍ಮೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅದೇ ದಿನ ಅಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆಯ ಮೇಲೆ ಅಭಿಮಾನಿ ಪುಂಡರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಇಂತಹ ಅಭಿಮಾನಿಗಳ ಮಂಗಾಟದಿಂದಾಗಿ ಹಲವು ವಿಶೇಷತೆಯಿಂದ ಕೂಡಿದ್ದ ಬರ್ತಡೇ ಸಂಭ್ರಮ, ಕಿರಿಕ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಅಂಡ್ ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದಿದ್ದ ದರ್ಶನ್, ತಮ್ಮ ಅಭಿಮಾನಿಗಳಿಗೆ ಅಂಡ್ ಬಗ್ಗಿಸಿಕೊಂಡು ತಮ್ಮ ಕೆಲಸ ನೋಡ್ಕಂಡ್ ಸುಮ್ಮನಿರಿ ಎಂದು ಹೇಳದಿದ್ದರೆ ಇಂತಹ ರಾದ್ಧಾಂತಗಳು ನಿಲ್ಲುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...