Homeಮುಖಪುಟ370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ...

370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

ಜಮ್ಮು ಮತ್ತು ಕಾಶ್ಮೀರ ಕುರಿತ ರಾಷ್ಟ್ರಪತಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆಯ ನಾಟಕ! ಅತ್ಯಾಚಾರ ಸಮರ್ಥಿಸಿದ್ದ ಆರೆಸ್ಸೆಸ್ ವಕೀಲನಿಂದ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 2019ನ್ನು ಪ್ರಶ್ನಿಸಿ ವಿಧಿ 32ರ ಅನ್ವಯ ಆರೆಸ್ಸೆಸ್‌ಗೆ ನಿಕಟವಾಗಿರುವ ಕುಖ್ಯಾತ ವಕೀಲ ಮನೋಹರಲಾಲ್ ಶರ್ಮಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮಾಡಿರುವ ತಂತ್ರವೆಂದು ನ್ಯಾಯಾಂಗ ವಲಯದಲ್ಲಿ ಮಾತನಾಡಲಾಗುತ್ತಿದ್ದು, ಅವರ ಕೋರಿಕೆಯಂತೆಯೇ ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ತನ್ನದೇ ಕಾನೂನುಬಾಹಿರ ಕ್ರಮದ ವಿರುದ್ಧ ಬಲವಾದ ಪ್ರಕರಣವನ್ನು ದುರ್ಬಲಗೊಳಿಸಲೆಂದೇ ದುರ್ಬಲವಾದ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಒಂದು ವೇಳೆ ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದಲ್ಲಿ ಈ ಆದೇಶವನ್ನು ನಿಜವಾಗಿಯೂ ವಿರೋಧಿಸುವ ಬೇರಾರಿಗೂ ಮುಂದೆ ಅದನ್ನು ಪ್ರಶ್ನಿಸುವುದು ಕಷ್ಟವಾಗುತ್ತದೆ. ಇದಕ್ಕಾಗಿಯೇ ಈ ಕುಟಿಲತಂತ್ರವನ್ನು ಹೆಣೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕುವ ರಾಷ್ಟ್ರಪತಿಯವರ ಆದೇಶವು ಸಂವಿಧಾನಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಹೇಳಿರುವ ಶರ್ಮಾ, ಸರಕಾರವು ಇದಕ್ಕಾಗಿ ಸಂಸದೀಯ ಹಾದಿಯಲ್ಲಿ ಮುಂದುವರಿಯಬೇಕಾಗಿತ್ತು ಎಂದು  ಹೇಳಿದ್ದಾರೆ.

ಸಂವಿಧಾನದ ವಿಧಿ 370ನ್ನು ಅದೇ ವಿಧಿಯಲ್ಲಿನ ಅಧಿಕಾರಗಳನ್ನು ಬಳಸಿಕೊಂಡು ಅಸಿಂಧುಗೊಳಿಸುವುದು ಸಂವಿಧಾನಬಾಹಿರ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆಗಸ್ಟ್ 5, 2019ರಂದು ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 1954ನ್ನು ಅಸಿಂಧುಗೊಳಿಸುತ್ತದೆ. ಅದು ಭಾರತೀಯ ಸಂವಿಧಾನದ ಎಲ್ಲಾ ವಿಧಿಗಳು ಜಮ್ಮು ಮತ್ತು ಕಾಶ್ಮೀರಕ್ಕೂ ಅನ್ವಯವಾಗುವುದಾಗಿ ಹೇಳುತ್ತದೆ. ‘ರಾಜ್ಯ ಸಾಂವಿಧಾನಿಕ ವಿಧಾನಸಭೆ’ ಎಂಬ ಪದವನ್ನು ಅದು ‘ರಾಜ್ಯ ಶಾಸಕಾಂಗ ವಿಧಾನಸಭೆ’ ಎಂಬ ಪದದಿಂದ ಬದಲಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ತರುತ್ತದೆ.

ಆರೆಸ್ಸೆಸ್ ವಕೀಲ ಎಂದೇ ಪರಿಚಿತರಾಗಿರುವ ಮನೋಹರಲಾಲ್ ಶರ್ಮಾ ಎಷ್ಟು ಕುಖ್ಯಾತ ವಕೀಲ ಎಂದರೆ 2013ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳ ಪರ ವಾದಿಸುತ್ತಾ, ಭಾರತದಲ್ಲಿ ಈ ತನಕ ‘ಗೌರವಾರ್ಹ ಮಹಿಳೆ’ಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವುದನ್ನು ತಾನು ಕೇಳಿಯೇ ಇಲ್ಲ ಎಂದು ಹೇಳಿದ್ದರು.

ಕೊಲೆಯಾದ ಕಾಲೇಜು ವಿದ್ಯಾರ್ಥಿನಿಯ ಸಂಗಾತಿಯೇ ಈ ಪ್ರಕರಣಕ್ಕೆ ‘ಸಂಪೂರ್ಣ ಹೊಣೆ’ ಎಂದು ವಾದಿಸಿದ್ದ ಈತ, ಅವಿವಾಹಿತ ಜೋಡಿ ರಾತ್ರಿ ಹೊತ್ತು ರಸ್ತೆಯಲ್ಲಿ ಇರಲೇಬಾರದಿತ್ತು ಎಂದು ಹೇಳಿದ್ದರು.

ಕೃಪೆ: ಅಕ್ಷಿತಾ ಸಕ್ಸೇನಾ, (ಲೈವ್ ಲಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....