Homeಮುಖಪುಟ370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ...

370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

ಜಮ್ಮು ಮತ್ತು ಕಾಶ್ಮೀರ ಕುರಿತ ರಾಷ್ಟ್ರಪತಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆಯ ನಾಟಕ! ಅತ್ಯಾಚಾರ ಸಮರ್ಥಿಸಿದ್ದ ಆರೆಸ್ಸೆಸ್ ವಕೀಲನಿಂದ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 2019ನ್ನು ಪ್ರಶ್ನಿಸಿ ವಿಧಿ 32ರ ಅನ್ವಯ ಆರೆಸ್ಸೆಸ್‌ಗೆ ನಿಕಟವಾಗಿರುವ ಕುಖ್ಯಾತ ವಕೀಲ ಮನೋಹರಲಾಲ್ ಶರ್ಮಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮಾಡಿರುವ ತಂತ್ರವೆಂದು ನ್ಯಾಯಾಂಗ ವಲಯದಲ್ಲಿ ಮಾತನಾಡಲಾಗುತ್ತಿದ್ದು, ಅವರ ಕೋರಿಕೆಯಂತೆಯೇ ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ತನ್ನದೇ ಕಾನೂನುಬಾಹಿರ ಕ್ರಮದ ವಿರುದ್ಧ ಬಲವಾದ ಪ್ರಕರಣವನ್ನು ದುರ್ಬಲಗೊಳಿಸಲೆಂದೇ ದುರ್ಬಲವಾದ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಒಂದು ವೇಳೆ ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದಲ್ಲಿ ಈ ಆದೇಶವನ್ನು ನಿಜವಾಗಿಯೂ ವಿರೋಧಿಸುವ ಬೇರಾರಿಗೂ ಮುಂದೆ ಅದನ್ನು ಪ್ರಶ್ನಿಸುವುದು ಕಷ್ಟವಾಗುತ್ತದೆ. ಇದಕ್ಕಾಗಿಯೇ ಈ ಕುಟಿಲತಂತ್ರವನ್ನು ಹೆಣೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕುವ ರಾಷ್ಟ್ರಪತಿಯವರ ಆದೇಶವು ಸಂವಿಧಾನಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಹೇಳಿರುವ ಶರ್ಮಾ, ಸರಕಾರವು ಇದಕ್ಕಾಗಿ ಸಂಸದೀಯ ಹಾದಿಯಲ್ಲಿ ಮುಂದುವರಿಯಬೇಕಾಗಿತ್ತು ಎಂದು  ಹೇಳಿದ್ದಾರೆ.

ಸಂವಿಧಾನದ ವಿಧಿ 370ನ್ನು ಅದೇ ವಿಧಿಯಲ್ಲಿನ ಅಧಿಕಾರಗಳನ್ನು ಬಳಸಿಕೊಂಡು ಅಸಿಂಧುಗೊಳಿಸುವುದು ಸಂವಿಧಾನಬಾಹಿರ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆಗಸ್ಟ್ 5, 2019ರಂದು ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 1954ನ್ನು ಅಸಿಂಧುಗೊಳಿಸುತ್ತದೆ. ಅದು ಭಾರತೀಯ ಸಂವಿಧಾನದ ಎಲ್ಲಾ ವಿಧಿಗಳು ಜಮ್ಮು ಮತ್ತು ಕಾಶ್ಮೀರಕ್ಕೂ ಅನ್ವಯವಾಗುವುದಾಗಿ ಹೇಳುತ್ತದೆ. ‘ರಾಜ್ಯ ಸಾಂವಿಧಾನಿಕ ವಿಧಾನಸಭೆ’ ಎಂಬ ಪದವನ್ನು ಅದು ‘ರಾಜ್ಯ ಶಾಸಕಾಂಗ ವಿಧಾನಸಭೆ’ ಎಂಬ ಪದದಿಂದ ಬದಲಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ತರುತ್ತದೆ.

ಆರೆಸ್ಸೆಸ್ ವಕೀಲ ಎಂದೇ ಪರಿಚಿತರಾಗಿರುವ ಮನೋಹರಲಾಲ್ ಶರ್ಮಾ ಎಷ್ಟು ಕುಖ್ಯಾತ ವಕೀಲ ಎಂದರೆ 2013ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳ ಪರ ವಾದಿಸುತ್ತಾ, ಭಾರತದಲ್ಲಿ ಈ ತನಕ ‘ಗೌರವಾರ್ಹ ಮಹಿಳೆ’ಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವುದನ್ನು ತಾನು ಕೇಳಿಯೇ ಇಲ್ಲ ಎಂದು ಹೇಳಿದ್ದರು.

ಕೊಲೆಯಾದ ಕಾಲೇಜು ವಿದ್ಯಾರ್ಥಿನಿಯ ಸಂಗಾತಿಯೇ ಈ ಪ್ರಕರಣಕ್ಕೆ ‘ಸಂಪೂರ್ಣ ಹೊಣೆ’ ಎಂದು ವಾದಿಸಿದ್ದ ಈತ, ಅವಿವಾಹಿತ ಜೋಡಿ ರಾತ್ರಿ ಹೊತ್ತು ರಸ್ತೆಯಲ್ಲಿ ಇರಲೇಬಾರದಿತ್ತು ಎಂದು ಹೇಳಿದ್ದರು.

ಕೃಪೆ: ಅಕ್ಷಿತಾ ಸಕ್ಸೇನಾ, (ಲೈವ್ ಲಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...