Homeಮುಖಪುಟ370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ...

370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

ಜಮ್ಮು ಮತ್ತು ಕಾಶ್ಮೀರ ಕುರಿತ ರಾಷ್ಟ್ರಪತಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆಯ ನಾಟಕ! ಅತ್ಯಾಚಾರ ಸಮರ್ಥಿಸಿದ್ದ ಆರೆಸ್ಸೆಸ್ ವಕೀಲನಿಂದ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 2019ನ್ನು ಪ್ರಶ್ನಿಸಿ ವಿಧಿ 32ರ ಅನ್ವಯ ಆರೆಸ್ಸೆಸ್‌ಗೆ ನಿಕಟವಾಗಿರುವ ಕುಖ್ಯಾತ ವಕೀಲ ಮನೋಹರಲಾಲ್ ಶರ್ಮಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮಾಡಿರುವ ತಂತ್ರವೆಂದು ನ್ಯಾಯಾಂಗ ವಲಯದಲ್ಲಿ ಮಾತನಾಡಲಾಗುತ್ತಿದ್ದು, ಅವರ ಕೋರಿಕೆಯಂತೆಯೇ ಶರ್ಮಾ ಈ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ತನ್ನದೇ ಕಾನೂನುಬಾಹಿರ ಕ್ರಮದ ವಿರುದ್ಧ ಬಲವಾದ ಪ್ರಕರಣವನ್ನು ದುರ್ಬಲಗೊಳಿಸಲೆಂದೇ ದುರ್ಬಲವಾದ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಒಂದು ವೇಳೆ ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದಲ್ಲಿ ಈ ಆದೇಶವನ್ನು ನಿಜವಾಗಿಯೂ ವಿರೋಧಿಸುವ ಬೇರಾರಿಗೂ ಮುಂದೆ ಅದನ್ನು ಪ್ರಶ್ನಿಸುವುದು ಕಷ್ಟವಾಗುತ್ತದೆ. ಇದಕ್ಕಾಗಿಯೇ ಈ ಕುಟಿಲತಂತ್ರವನ್ನು ಹೆಣೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕುವ ರಾಷ್ಟ್ರಪತಿಯವರ ಆದೇಶವು ಸಂವಿಧಾನಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಹೇಳಿರುವ ಶರ್ಮಾ, ಸರಕಾರವು ಇದಕ್ಕಾಗಿ ಸಂಸದೀಯ ಹಾದಿಯಲ್ಲಿ ಮುಂದುವರಿಯಬೇಕಾಗಿತ್ತು ಎಂದು  ಹೇಳಿದ್ದಾರೆ.

ಸಂವಿಧಾನದ ವಿಧಿ 370ನ್ನು ಅದೇ ವಿಧಿಯಲ್ಲಿನ ಅಧಿಕಾರಗಳನ್ನು ಬಳಸಿಕೊಂಡು ಅಸಿಂಧುಗೊಳಿಸುವುದು ಸಂವಿಧಾನಬಾಹಿರ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆಗಸ್ಟ್ 5, 2019ರಂದು ರಾಷ್ಟ್ರಪತಿಯವರು ಹೊರಡಿಸಿರುವ ಸಾಂವಿಧಾನಿಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ) ಆದೇಶ 1954ನ್ನು ಅಸಿಂಧುಗೊಳಿಸುತ್ತದೆ. ಅದು ಭಾರತೀಯ ಸಂವಿಧಾನದ ಎಲ್ಲಾ ವಿಧಿಗಳು ಜಮ್ಮು ಮತ್ತು ಕಾಶ್ಮೀರಕ್ಕೂ ಅನ್ವಯವಾಗುವುದಾಗಿ ಹೇಳುತ್ತದೆ. ‘ರಾಜ್ಯ ಸಾಂವಿಧಾನಿಕ ವಿಧಾನಸಭೆ’ ಎಂಬ ಪದವನ್ನು ಅದು ‘ರಾಜ್ಯ ಶಾಸಕಾಂಗ ವಿಧಾನಸಭೆ’ ಎಂಬ ಪದದಿಂದ ಬದಲಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ತರುತ್ತದೆ.

ಆರೆಸ್ಸೆಸ್ ವಕೀಲ ಎಂದೇ ಪರಿಚಿತರಾಗಿರುವ ಮನೋಹರಲಾಲ್ ಶರ್ಮಾ ಎಷ್ಟು ಕುಖ್ಯಾತ ವಕೀಲ ಎಂದರೆ 2013ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳ ಪರ ವಾದಿಸುತ್ತಾ, ಭಾರತದಲ್ಲಿ ಈ ತನಕ ‘ಗೌರವಾರ್ಹ ಮಹಿಳೆ’ಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವುದನ್ನು ತಾನು ಕೇಳಿಯೇ ಇಲ್ಲ ಎಂದು ಹೇಳಿದ್ದರು.

ಕೊಲೆಯಾದ ಕಾಲೇಜು ವಿದ್ಯಾರ್ಥಿನಿಯ ಸಂಗಾತಿಯೇ ಈ ಪ್ರಕರಣಕ್ಕೆ ‘ಸಂಪೂರ್ಣ ಹೊಣೆ’ ಎಂದು ವಾದಿಸಿದ್ದ ಈತ, ಅವಿವಾಹಿತ ಜೋಡಿ ರಾತ್ರಿ ಹೊತ್ತು ರಸ್ತೆಯಲ್ಲಿ ಇರಲೇಬಾರದಿತ್ತು ಎಂದು ಹೇಳಿದ್ದರು.

ಕೃಪೆ: ಅಕ್ಷಿತಾ ಸಕ್ಸೇನಾ, (ಲೈವ್ ಲಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...