Homeಮುಖಪುಟಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು 'ಜಾತ್ಯತೀತತೆ' ಸಂವಿಧಾನದ ಮೂಲ ರಚನೆ ಎಂದಿದೆ:...

ಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು ‘ಜಾತ್ಯತೀತತೆ’ ಸಂವಿಧಾನದ ಮೂಲ ರಚನೆ ಎಂದಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಿಂದ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 10 ) ಆಗಸ್ಟ್‌ಗೆ ಮುಂದೂಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ಈ ನ್ಯಾಯಾಲಯದ ಹಲವಾರು ತೀರ್ಪುಗಳು ‘ಜಾತ್ಯತೀತ’ ಎಂಬ ಪದ ನಮ್ಮ ಸಂವಿಧಾನದ ಮೂಲ ರಚನೆ ಎಂಬುವುದಾಗಿ ಹೇಳಿದೆ” ಎಂದಿದ್ದಾರೆ.

ಒಂದೇ ವಿಷಯದ ಕುರಿತು ಮೂರು ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ, ಅರ್ಜಿದಾರರ ವಕೀಲರೊಬ್ಬರು  ಮಾಡಿದ ಮನವಿಯನ್ನು ಪರಿಗಣಿಸಿ, ಆಗಸ್ಟ್ 12 ರಿಂದ ವಿಷಯವನ್ನು ವಿಚಾರಣೆಗೆ ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಸಂವಿಧಾನದ ಪೀಠಿಕೆ ಅಂಗೀಕರಿಸಿದ ನವೆಂಬರ್ 26, 1949ರ ದಿನಾಂಕವನ್ನು ಬದಲಾಯಿಸದೆ ತಿದ್ದುಪಡಿ ಮಾಡಬಹುದೇ? ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸುಬ್ರಮಣಿಯನ್ ಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಪ್ರಶ್ನೆ ಎತ್ತಿತ್ತು.

ಪ್ರಸ್ತುತ ಅರ್ಜಿಯು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರವದಿಯಲ್ಲಿ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಲು ಅನುವು ಮಾಡಿಕೊಟ್ಟ 1976ರ 42ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದೆ. ಹೊಸ ಪದಗಳ ಅಳವಡಿಕೆ 368ನೇ ವಿಧಿಯ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಿದೆ.

ಸಂವಿಧಾನದ ರಚನಾಕಾರರು ಪ್ರಜಾಪ್ರಭುತ್ವದ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ.ಬಿಆರ್‌ ಅಂಬೇಡ್ಕರ್ ಈ ಪದಗಳು ಅಳವಡಿಸುವುದನ್ನು ವಿರೋಧಿಸಿದ್ದರು ಎಂದಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸಂಸದ ಬಿನೋಯ್ ವಿಶ್ವಂ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಅರ್ಜಿಯನ್ನು ವಿರೋಧಿಸಿ, “ಜಾತ್ಯತೀತತೆ ಮತ್ತು ಸಮಾಜವಾದವು” ಭಾರತೀಯ ಸಂವಿಧಾನದ ಅಂತರ್ಗತ ವಿಷಯಗಳಾಗಿವೆ. ಆದ್ದರಿಂದ, ಪೀಠಿಕೆಯಲ್ಲಿ ಈ ಪದಗಳ ಸೇರ್ಪಡೆಯಿಂದ ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವುದಿಲ್ಲ ಎಂದಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಡಿಸೆಂಬರ್ 1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲು ತಿದ್ದುಪಡಿ ಮಾಡಿತ್ತು. ‘ರಾಷ್ಟ್ರದ ಏಕತೆ’ ಎಂಬ ಪದಗುಚ್ಛವನ್ನು ‘ರಾಷ್ಟ್ರದ ಏಕತೆ ಮತ್ತು ಸಮಗ್ರತೆ’ ಎಂದು ಬದಲಾಯಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬುವುದು ಅರ್ಜಿದಾರರ ವಾದವಾಗಿದೆ.

ಮೂಲ ಪೀಠಿಕೆಯಲ್ಲಿ ಭಾರತವನ್ನು ‘ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ’ ಎಂದು ಉಲ್ಲೇಖಿಸಲಾಗಿತ್ತು. ‘ಸಾರ್ವಭೌಮ’ ಮತ್ತು ‘ಪ್ರಜಾಪ್ರಭುತ್ವ’ದ ನಡುವೆ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್‌ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಹೇಳಿತ್ತು.

ಇದನ್ನೂ ಓದಿ : ಮುಸ್ಲಿಂ ಮಹಿಳೆ ವಿಚ್ಛೇದಿತ ಗಂಡನಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...