Homeಮುಖಪುಟಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು 'ಜಾತ್ಯತೀತತೆ' ಸಂವಿಧಾನದ ಮೂಲ ರಚನೆ ಎಂದಿದೆ:...

ಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು ‘ಜಾತ್ಯತೀತತೆ’ ಸಂವಿಧಾನದ ಮೂಲ ರಚನೆ ಎಂದಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಿಂದ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 10 ) ಆಗಸ್ಟ್‌ಗೆ ಮುಂದೂಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ಈ ನ್ಯಾಯಾಲಯದ ಹಲವಾರು ತೀರ್ಪುಗಳು ‘ಜಾತ್ಯತೀತ’ ಎಂಬ ಪದ ನಮ್ಮ ಸಂವಿಧಾನದ ಮೂಲ ರಚನೆ ಎಂಬುವುದಾಗಿ ಹೇಳಿದೆ” ಎಂದಿದ್ದಾರೆ.

ಒಂದೇ ವಿಷಯದ ಕುರಿತು ಮೂರು ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ, ಅರ್ಜಿದಾರರ ವಕೀಲರೊಬ್ಬರು  ಮಾಡಿದ ಮನವಿಯನ್ನು ಪರಿಗಣಿಸಿ, ಆಗಸ್ಟ್ 12 ರಿಂದ ವಿಷಯವನ್ನು ವಿಚಾರಣೆಗೆ ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಸಂವಿಧಾನದ ಪೀಠಿಕೆ ಅಂಗೀಕರಿಸಿದ ನವೆಂಬರ್ 26, 1949ರ ದಿನಾಂಕವನ್ನು ಬದಲಾಯಿಸದೆ ತಿದ್ದುಪಡಿ ಮಾಡಬಹುದೇ? ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸುಬ್ರಮಣಿಯನ್ ಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಪ್ರಶ್ನೆ ಎತ್ತಿತ್ತು.

ಪ್ರಸ್ತುತ ಅರ್ಜಿಯು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರವದಿಯಲ್ಲಿ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಲು ಅನುವು ಮಾಡಿಕೊಟ್ಟ 1976ರ 42ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದೆ. ಹೊಸ ಪದಗಳ ಅಳವಡಿಕೆ 368ನೇ ವಿಧಿಯ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಿದೆ.

ಸಂವಿಧಾನದ ರಚನಾಕಾರರು ಪ್ರಜಾಪ್ರಭುತ್ವದ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ.ಬಿಆರ್‌ ಅಂಬೇಡ್ಕರ್ ಈ ಪದಗಳು ಅಳವಡಿಸುವುದನ್ನು ವಿರೋಧಿಸಿದ್ದರು ಎಂದಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸಂಸದ ಬಿನೋಯ್ ವಿಶ್ವಂ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಅರ್ಜಿಯನ್ನು ವಿರೋಧಿಸಿ, “ಜಾತ್ಯತೀತತೆ ಮತ್ತು ಸಮಾಜವಾದವು” ಭಾರತೀಯ ಸಂವಿಧಾನದ ಅಂತರ್ಗತ ವಿಷಯಗಳಾಗಿವೆ. ಆದ್ದರಿಂದ, ಪೀಠಿಕೆಯಲ್ಲಿ ಈ ಪದಗಳ ಸೇರ್ಪಡೆಯಿಂದ ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವುದಿಲ್ಲ ಎಂದಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಡಿಸೆಂಬರ್ 1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲು ತಿದ್ದುಪಡಿ ಮಾಡಿತ್ತು. ‘ರಾಷ್ಟ್ರದ ಏಕತೆ’ ಎಂಬ ಪದಗುಚ್ಛವನ್ನು ‘ರಾಷ್ಟ್ರದ ಏಕತೆ ಮತ್ತು ಸಮಗ್ರತೆ’ ಎಂದು ಬದಲಾಯಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬುವುದು ಅರ್ಜಿದಾರರ ವಾದವಾಗಿದೆ.

ಮೂಲ ಪೀಠಿಕೆಯಲ್ಲಿ ಭಾರತವನ್ನು ‘ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ’ ಎಂದು ಉಲ್ಲೇಖಿಸಲಾಗಿತ್ತು. ‘ಸಾರ್ವಭೌಮ’ ಮತ್ತು ‘ಪ್ರಜಾಪ್ರಭುತ್ವ’ದ ನಡುವೆ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್‌ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಹೇಳಿತ್ತು.

ಇದನ್ನೂ ಓದಿ : ಮುಸ್ಲಿಂ ಮಹಿಳೆ ವಿಚ್ಛೇದಿತ ಗಂಡನಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...