Homeಮುಖಪುಟಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು 'ಜಾತ್ಯತೀತತೆ' ಸಂವಿಧಾನದ ಮೂಲ ರಚನೆ ಎಂದಿದೆ:...

ಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು ‘ಜಾತ್ಯತೀತತೆ’ ಸಂವಿಧಾನದ ಮೂಲ ರಚನೆ ಎಂದಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಿಂದ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 10 ) ಆಗಸ್ಟ್‌ಗೆ ಮುಂದೂಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ಈ ನ್ಯಾಯಾಲಯದ ಹಲವಾರು ತೀರ್ಪುಗಳು ‘ಜಾತ್ಯತೀತ’ ಎಂಬ ಪದ ನಮ್ಮ ಸಂವಿಧಾನದ ಮೂಲ ರಚನೆ ಎಂಬುವುದಾಗಿ ಹೇಳಿದೆ” ಎಂದಿದ್ದಾರೆ.

ಒಂದೇ ವಿಷಯದ ಕುರಿತು ಮೂರು ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ, ಅರ್ಜಿದಾರರ ವಕೀಲರೊಬ್ಬರು  ಮಾಡಿದ ಮನವಿಯನ್ನು ಪರಿಗಣಿಸಿ, ಆಗಸ್ಟ್ 12 ರಿಂದ ವಿಷಯವನ್ನು ವಿಚಾರಣೆಗೆ ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಸಂವಿಧಾನದ ಪೀಠಿಕೆ ಅಂಗೀಕರಿಸಿದ ನವೆಂಬರ್ 26, 1949ರ ದಿನಾಂಕವನ್ನು ಬದಲಾಯಿಸದೆ ತಿದ್ದುಪಡಿ ಮಾಡಬಹುದೇ? ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸುಬ್ರಮಣಿಯನ್ ಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಪ್ರಶ್ನೆ ಎತ್ತಿತ್ತು.

ಪ್ರಸ್ತುತ ಅರ್ಜಿಯು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರವದಿಯಲ್ಲಿ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಲು ಅನುವು ಮಾಡಿಕೊಟ್ಟ 1976ರ 42ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದೆ. ಹೊಸ ಪದಗಳ ಅಳವಡಿಕೆ 368ನೇ ವಿಧಿಯ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಿದೆ.

ಸಂವಿಧಾನದ ರಚನಾಕಾರರು ಪ್ರಜಾಪ್ರಭುತ್ವದ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ.ಬಿಆರ್‌ ಅಂಬೇಡ್ಕರ್ ಈ ಪದಗಳು ಅಳವಡಿಸುವುದನ್ನು ವಿರೋಧಿಸಿದ್ದರು ಎಂದಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸಂಸದ ಬಿನೋಯ್ ವಿಶ್ವಂ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಅರ್ಜಿಯನ್ನು ವಿರೋಧಿಸಿ, “ಜಾತ್ಯತೀತತೆ ಮತ್ತು ಸಮಾಜವಾದವು” ಭಾರತೀಯ ಸಂವಿಧಾನದ ಅಂತರ್ಗತ ವಿಷಯಗಳಾಗಿವೆ. ಆದ್ದರಿಂದ, ಪೀಠಿಕೆಯಲ್ಲಿ ಈ ಪದಗಳ ಸೇರ್ಪಡೆಯಿಂದ ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವುದಿಲ್ಲ ಎಂದಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಡಿಸೆಂಬರ್ 1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲು ತಿದ್ದುಪಡಿ ಮಾಡಿತ್ತು. ‘ರಾಷ್ಟ್ರದ ಏಕತೆ’ ಎಂಬ ಪದಗುಚ್ಛವನ್ನು ‘ರಾಷ್ಟ್ರದ ಏಕತೆ ಮತ್ತು ಸಮಗ್ರತೆ’ ಎಂದು ಬದಲಾಯಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬುವುದು ಅರ್ಜಿದಾರರ ವಾದವಾಗಿದೆ.

ಮೂಲ ಪೀಠಿಕೆಯಲ್ಲಿ ಭಾರತವನ್ನು ‘ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ’ ಎಂದು ಉಲ್ಲೇಖಿಸಲಾಗಿತ್ತು. ‘ಸಾರ್ವಭೌಮ’ ಮತ್ತು ‘ಪ್ರಜಾಪ್ರಭುತ್ವ’ದ ನಡುವೆ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್‌ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಹೇಳಿತ್ತು.

ಇದನ್ನೂ ಓದಿ : ಮುಸ್ಲಿಂ ಮಹಿಳೆ ವಿಚ್ಛೇದಿತ ಗಂಡನಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...