Homeಚಳವಳಿಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

- Advertisement -
- Advertisement -

“ಏನ್ಸಾರ್.. ಶಾಲೆಗೆ ಬರ್ತೀರಿ, ಹೋಗ್ತೀರಿ, ಅದು ಯಾರಿಗೋ ವಾಟ್ಸಪ್ ಇದ್ದವರಿಗೆ ಅದೇನೋ ಆನ್ಲೈನ್ ಪಾಠ  ಕಳಿಸ್ತಾರಂತೆ. ದುಡ್ಡಿದ್ದೋರ ಮಕ್ಕಳು ಹೆಂಗೋ ಓತ್ತಾರೆ. ನನ್ ಮಕ್ಕಳಿಗೆ ಹೆಂಗೆ ಸರಾ…?  ನನಗೆ ವಾಟ್ಸಾಪ್ ಪಾಟ್ಸಾಪು…. ಆನ್ಲೈನ್ ಗೀನ್ಲೈನ್ ಎಲ್ಲಾ ಗೊತ್ತಿಲ್ಲ ಸರಾ… ನನ್ನ ಮಕ್ಕಳು ನೀವು ಕಲಿಸಿದ್ದೆಲ್ಲ ಮರುತು ಹಾಳಾಗಿ ಹೋಗ್ಯಾವೆ. ಲಾಕ್ ಡೌನ್ ಅದೂ ಇದೂ ಅಂತ ನಮ್ಮ ಬದುಕು ಹಾಳಾತು. ಈ ಕಡೆ ಮಕ್ಕಳು ಶಾಲೆ ಗೀಲೆ ಇಲ್ಲದೆ ಬದುಕು ಹಾಳಾಗುತ್ತಿದೆ. ಪ್ಯಾಟೆ, ಪಟ್ನ, ರಾಜಕೀಯ ಎಲ್ಲಾ ನಡಿತಾ ಇದೆ. ಶಾಲೆ ಯಾಕಿಲ್ಲ ಸರಾ…? ಒಂದು ಕ್ಲಾಸ್ ಆದರೂ ದೂರ ದೂರ ಕೂರಿಸಿಕೊಂಡು ಮಕ್ಕಳೇ ಪಾಠ ಮಾಡಿದರೆ ಏನಾಗುತ್ತೆ ಸಾರ್…. ಏನಾದರೂ ಮಾಡಿ ಸಾರ್…” ಇದು ಹಲವು ಮಕ್ಕಳ ಪಾಲಕರ ಮಾತು.

ಎರಡನೇ ವರ್ಷಕ್ಕೂ ಕಾಲಿಟ್ಟ ಕೊರೋನಾ ವಿಪತ್ತಿನಿಂದ ಬೇರೆಬೇರೆ ವಲಯಗಳಿಗೆ ಆದ ನಷ್ಟ ಅಂದಾಜು ಮಾಡಲಾಗುತ್ತಿದೆ. ಪೂರಕ ಪರಿಹಾರ ಪ್ಯಾಕೇಜುಗಳನ್ನು ಘೋಷಿಸಲಾಗುತ್ತಿದೆ. ಆದರೆ ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿ ಯಾವುದೇ ರೀತಿಯಾದ ತೀವ್ರತರವಾದ ಯೋಜನೆಗಳತ್ತ ಇನ್ನೂ ಗಮನಹರಿಸಿಲ್ಲ. ಭಾರತದ ಭವಿಷ್ಯವಿರುವುದು ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳಲ್ಲಿ. ದೀರ್ಘಕಾಲ ಅವರು ಶಿಕ್ಷಣದಿಂದ ವಂಚಿತರಾದರೆ ಬಹು ಆಯಾಮದಲ್ಲಿ ನಷ್ಟವಾಗುವುದು ಖಚಿತ. ಈಗಾಗಲೇ ನಿರಂತರ ಎರಡನೇ ವರ್ಷದತ್ತ ಮನೆಯಲ್ಲಿಯೇ ಮಕ್ಕಳು ಉಳಿದಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಉಳಿದಿದ್ದು, ಈವರೆಗೆ ಕಲಿತದ್ದನ್ನೆಲ್ಲಾ ಮರೆತಿದ್ದೂ ಅಲ್ಲದೆ, ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕುಟುಂಬದ ಸದಸ್ಯರೊಡನೆ ವ್ಯತಿರಿಕ್ತವಾಗಿ ವರ್ತಿಸುತ್ತಿರುವುದನ್ನು ಸಹ ನೀವು ಸಹ ಗಮನಿಸಿರುತ್ತೀರಿ. ಇಂತಹ ಸಂದಿಗ್ಧ ಸಮಯದಲ್ಲಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದು ಸರ್ಕಾರದ ಮತ್ತು ಪಾಲಕರ ಆದ್ಯ ಕರ್ತವ್ಯವಾಗಬೇಕಿತ್ತು.

ಸರ್ಕಾರಗಳು ಗ್ರಾಮೀಣ ಸಮುದಾಯದ ಮಕ್ಕಳ ಆರೋಗ್ಯಕ್ಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಹಕ್ಕು ರಕ್ಷಿಸಲು ಪರಿಣಾಮಕಾರಿ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಬೇಕಿದೆ. ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಸಹ ಆಗಿದೆ. ಮನೆಮನೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಗುವಂತೆ ಮಾಡಲು ಹಲವು ಯೋಜನೆಗಳನ್ನು ಹಾಕಿಕೊಳ್ಳಬಹುದಿತ್ತು. ಆದರೆ ಈವರೆಗೂ ಸೂಕ್ತ ನಿರ್ಧಾರ ಕೈಗೊಂಡಿಲ್ಲ.

ಬೆಂಗಳೂರಿನಂತಹ ಮಹಾ ನಗರದಲ್ಲಿ ಶೈಕ್ಷಣಿಕ ಚಟುವಟಿಕೆಗೆ ಇರುವ ಅಡೆತಡೆಗಳು ನಮ್ಮ ಹಳ್ಳಿಯ ಹತ್ತಿಪ್ಪತ್ತು ಮಕ್ಕಳಿರುವ ಶಾಲೆಗಳಲ್ಲಿ ಇಲ್ಲ. ಹಾಗಾಗಿ ಹಳ್ಳಿಗಳಲ್ಲಿ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಕೆಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೊಂದರೆಯಿಲ್ಲದೆ ನಡೆಸಬಹುದು. ರಾಜ್ಯದಲ್ಲಿ ಇರುವ 45 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಅರ್ಧದಷ್ಟು ಶಾಲೆಗಳು ಸಣ್ಣ ಸಣ್ಣ ಹಳ್ಳಿಗಳಲ್ಲಿದ್ದು ಸರಾಸರಿ 50 ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳಾಗಿವೆ. ಇಂತಹ ಶಾಲೆಗಳಲ್ಲಿ ದಿನಕ್ಕೆ 10-15 ಮಕ್ಕಳಂತೆ ತರಗತಿಗಳನ್ನು ನಡೆಸಲು ಸಾಕಷ್ಟು ಅವಕಾಶಗಳು ಇವೆ. ಈ ಬಗ್ಗೆ  ಸಾಧ್ಯತೆ – ಸವಾಲುಗಳ ಪರಿಶೀಲನೆ ಅಗತ್ಯವಿದೆ. ಆನ್ಲೈನ್ ವ್ಯವಸ್ಥೆ ಇಲ್ಲದ ಮಕ್ಕಳಿಗೆ ಇದು ಸಂಜೀವಿನಿ ಆಗಲಿದೆ. ಇದಕ್ಕಾಗಿ ಆಯಾ ಊರಿನ ಸ್ಥಳೀಯ-ಶಿಕ್ಷಿತ ಯುವಕರನ್ನು ಸಹ ಸ್ವಯಂಸೇವಕರಾಗಿ ನೇಮಿಸಿಕೊಂಡು ಬಳಸಿಕೊಳ್ಳಬಹುದು. ಇದಕ್ಕೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲೇಬೇಕು ಎಂಬ ಬದ್ದತೆ, ದೂರದೃಷ್ಟಿಯ ಯೋಜನೆ ಅಗತ್ಯವಷ್ಟೇ ಇದೆ.

ನಗರ ಪ್ರದೇಶದ ಬಹುತೇಕ ಮಕ್ಕಳು ಆನ್ ಲೈನ್ ನಿಂದ ಶಿಕ್ಷಣ ಅಷ್ಟಿಷ್ಟು ಪಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಆನ್ಲೈನ್ ವ್ಯವಸ್ಥೆಯೇ ಇಲ್ಲದ, ಡಿಜಿಟಲ್ ಶಿಕ್ಷಣವನ್ನು ತಿಳಿಯದ ಪಾಲಕರ ಮಕ್ಕಳ ನಡುವೆ ಗುಣಮಟ್ಟದ ಕಲಿಯುವಿಕೆಯ, ಶೈಕ್ಷಣಿಕ ಚಟುವಟಿಕೆಯ ಅಂತರ ಹೆಚ್ಚಾಗುತ್ತಿದೆ. ಇದರಿಂದ ಶಿಕ್ಷಣ ವಂಚಿತರು ಮತ್ತು ಶಿಕ್ಷಣ ಪಡೆದವರ ನಡುವಿನ ಅಂತರ ಮತ್ತಷ್ಟು ವಿಸ್ತರಿಸಿಕೊಳ್ಳುವ ಅಪಾಯವೂ ಇದೆ. ಎಲ್ಲ ಉದ್ಯೋಗಗಳಿಗೂ ಇಂದಿನ ಸ್ಪರ್ಧಾ ಶಿಕ್ಷಣ ವ್ಯವಸ್ಥೆಯಲ್ಲಿ ಗ್ರಾಮೀಣ ಭಾಗದ ಮಕ್ಕಳು ಮತ್ತಷ್ಟು ಹಿಂದಕ್ಕೆ ತಳ್ಳಲ್ಪಡುವ  ಅಪಾಯಗಳಿವೆ. ಈಗಾಗಲೇ ಎಲ್ಲ ಕ್ಷೇತ್ರಕ್ಕೂ ವ್ಯಾಪಿಸಿರುವ ಡಿಜಿಟಲ್ ಯುಗದಲ್ಲಿ ಡಿಜಿಟಲ್ ಸಾಕ್ಷರರು, ಡಿಜಿಟಲ್ ಸೌಲಭ್ಯ ವಂಚಿತರ ನಡುವೆ ಅಂತರ ಮುಂದುವರಿಯುತ್ತಲೇ ಇದೆ. ಹೀಗೆ ಮುಂದುವರೆದರೆ  ಈ ಹಿಂದಿನ ಶತಮಾನಗಳಲ್ಲಿ ಇದ್ದ ಬೇರೆ ಬೇರೆ ರೂಪದ ಅಸಮಾನತೆಗಳಂತೆ ನವರೂಪದ ಬೃಹತ್ ಅಸಮಾನತೆಗಳ ಅಂತರವೂ ಹೆಚ್ಚಾಗುತ್ತದೆ.

ಒಂದು ದೇಶ ಸುಭಿಕ್ಷವಾಗಿ ಪ್ರಗತಿಯತ್ತ ಮುಂದುವರೆಯಲು ಆಯಾ ದೇಶದ ಎಲ್ಲ ಹಂತದ ಪ್ರಜೆಗಳ ಸರ್ವೋದಯ ಅತಿ ಮುಖ್ಯವಾಗುತ್ತದೆ. ಹಾಗಾಗಿ ಬೃಹತ್ ಭಾರತದ ಭವಿಷ್ಯದ ಪ್ರಜೆಗಳಾದ ಗ್ರಾಮೀಣ ಸಮುದಾಯದ ಮಕ್ಕಳು ಈ ಕೊರೋನಾ ಕಾಲಘಟ್ಟದಲ್ಲಿ ನಿರಂತರ ಶಿಕ್ಷಣ ಪಡೆಯಲು ವಿಶೇಷ ಯೋಜನೆಗಳನ್ನು ರೂಪಿಸಬೇಕಾಗಿದೆ. ಈ ಕುರಿತಾಗಿ ಸರ್ಕಾರಗಳು ಹೆಚ್ಚಾಗಿ ಗಮನ ಹರಿಸದಿದ್ದರಿಂದ ಹಳ್ಳಿಹಳ್ಳಿಯಲ್ಲಿ ಪಾಲಕರು ಸಾಕಷ್ಟು ಆಕ್ರೋಶಿತರಾಗಿದ್ದಾರೆ. “ಏನಾದರೂ ಮಾಡಿ ಶಾಲೆ ಓಪನ್ ಮಾಡಿ ಸರ್, ನನ್ಮಕ್ಳು ಎಲ್ಲ ಮರೆತು ಹಾಳಾಗಿ ಹೋಗಿವೆ.” ಅನ್ನುವ ಪಾಲಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳಿಗೆ ಶಿಕ್ಷಣ ಹಕ್ಕು ರಕ್ಷಿಸುವುದು  ಹೇಗೆ ಎನ್ನುವ ಬಗ್ಗೆ  ಕನಿಷ್ಠ ಪಕ್ಷ ಆಯಾ ಗ್ರಾಮದ ಶಿಕ್ಷಕರನ್ನು ಮತ್ತು ಸ್ಥಳೀಯ ಸ್ವಯಂ ಸೇವಕರನ್ನು ನೇಮಿಸಿಕೊಂಡು ಪೂರಕ ಬೋಧನಾ ಕ್ರಮ ಅನುಸರಿಸಬಹುದಾಗಿತ್ತು. ಆಯಾ ವಠಾರದಲ್ಲಿನ ಯುವ ಶಿಕ್ಷಿತರನ್ನು ಆಯಾ ಕೇರಿಯ ಮಕ್ಕಳಿಗೆ ಕಲಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಬಹುದಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ  ಮನೆಮನೆಗೆ ಬಿಸಿಊಟದ ಪಡಿತರ ಹಂಚಿದ ಇಲಾಖೆ ಜ್ಞಾನವನ್ನು ಸಹ ಹಂಚಲು ಕ್ರಮಕೈಗೊಳ್ಳಬೇಕು ಎನ್ನುವುದು ಪಾಲಕರ ಬಯಕೆಯಾಗಿದೆ.

ಸದ್ಯ ಈಗ ಸಂಭವಿಸಿರುವ ಕೋರೋನ ವಿಪತ್ತಿನಿಂದ ಪಾರಾಗಲು ಉದ್ಯಮ ವಲಯ ಬೇರೆ ಬೇರೆ ಮಾರ್ಗಗಳನ್ನು ಕಂಡುಕೊಂಡು ಚೇತರಿಸಿಕೊಳ್ಳುತ್ತಿದೆ. ಮೆಡಿಕಲ್ ಉದ್ಯಮ ವಲಯ ಬೃಹತ್ ಲಾಭದಿಂದ ಕೇಕೆ ಹಾಕುತ್ತಿದೆ. ಆದರೂ ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆ ಆಗಿರುವುದರಿಂದ
ಎಲ್ಲ ವಸ್ತುಗಳ ಬೆಲೆಗಳು ಗಗನಕ್ಕೆ ಏರಿದ್ದು ಸಾಮಾನ್ಯರ ಜನಜೀವನ ದುಸ್ತರವಾಗಿದೆ. ಇಂತಹ ಕಷ್ಟಕಾಲದಲ್ಲಿ ಜನಸಾಮಾನ್ಯರು ಸ್ಮಾರ್ಟ್‌ಫೋನ್‌ಗಳಿಗೆ, ಇಂಟರ್‌ನೆಟ್‌ಗೆ ಮತ್ತಷ್ಟು ದುಡ್ಡು ಹಾಕುವ ಪರಿಸ್ತಿತಿಯಲ್ಲಿಲ್ಲ. ಇದೆಲ್ಲದಕ್ಕೂ ಮಿಗಿಲಾಗಿ ಬೃಹತ್ ಗ್ರಾಮೀಣ ಸಮುದಾಯದ ಮಕ್ಕಳು ಎರಡು ವರ್ಷಗಳಿಂದ ಶಿಕ್ಷಣದಿಂದ ತುಂಬಲಾಗದ ನಷ್ಟವಾಗಿದೆ. ಭವಿಷ್ಯದ ಭಾರತದ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮಕ್ಕಳ ಶೈಕ್ಷಣಿಕ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಲಕ್ಷ ಲಕ್ಷ ಕೋಟಿಗಳ ಬಜೆಟ್ ಮಂಡಿಸುವ ಇಂದಿನ ಕಾಲದಲ್ಲಿ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸಲು ಹೆಚ್ಚುವರಿ ಹಣ ಮಕ್ಕಳ ಮನೆಮನೆ ತಲುಪುವಂತೆ ವಿನಿಯೋಗಿಸಬೇಕು. ಪ್ರಜೆಗಳು ಕೇಳದ ಯಾವುದೋ ಯೋಜನೆಗಳನ್ನು, ಪ್ರತಿಮೆಗಳನ್ನು ಕಟ್ಟಲು ಕೋಟಿಕೋಟಿ ವ್ಯಯಿಸುವ ಮೊದಲು  ಪ್ರಜೆಗಳ ತುರ್ತು ಅವಶ್ಯಕತೆಗಳನ್ನು, ಮಕ್ಕಳ  ಆರೋಗ್ಯ, ಶೈಕ್ಷಣಿಕ ಹಕ್ಕನ್ನು ಕಾಪಾಡಲು ಆಳುವ ಸರ್ಕಾರಗಳು ಜವಾಬ್ದಾರಿ ವಹಿಸಬೇಕು ಎನ್ನುವುದು ಹಳ್ಳಿಯ ಬೀದಿ ಬೀದಿಯಲ್ಲಿ ಕೇಳಿಬರುವ ಮಾತಾಗಿದೆ.

ರವಿರಾಜ್ ಸಾಗರ್, ಮಂಡಗಳಲೆ.

(ಸಾಗರ ತಾಲ್ಲೂಕಿನ ಮಂಡಗಳಲೆ ಗ್ರಾಮದ ರವಿರಾಜ್ ಸದ್ಯ ಮಾನ್ವಿ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ರಂಗಭೂಮಿ ಇವರ ಆಸಕ್ತಿಯ ಕ್ಷೇತ್ರ)


ಇದನ್ನೂ ಓದಿ: ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...