Homeಕರ್ನಾಟಕಕೋವಿಡ್ ತಂದಿಟ್ಟ ಮನೆಯೊಳಗಿನ ಹಿಂಸೆಯ ಸವಾಲುಗಳು

ಕೋವಿಡ್ ತಂದಿಟ್ಟ ಮನೆಯೊಳಗಿನ ಹಿಂಸೆಯ ಸವಾಲುಗಳು

- Advertisement -
- Advertisement -

ಕರೋನ ವೈರಸ್ಸಿನಿಂದ ಬಚಾವಾಗಲು ಮನೆಯ ಒಳಗೇ ಇರಿ. ನಿಮ್ಮ ಮನೆಯ ಒಳಗೆ ನೀವಿರುವ ತನಕ ನಿಮ್ಮನ್ನು ವೈರಸ್ ಎಂಬ ಸೂಕ್ಷ್ಮಜೀವಿಯೂ ಮುಟ್ಟಲಾರದು. ಹೊರಗೆ ಬಂದಿರೋ, ನಿಮ್ಮ ಜೀವಕ್ಕೆ ಹಾನಿ ಖಂಡಿತಾ ಎಂದು ಸರ್ಕಾರ ಪದೇ ಪದೇ ಹೇಳುತ್ತಲೇ ಇದೆ. ಇದನ್ನು ಜಗತ್ತಿನಾದ್ಯಂತ ಪಾಲಿಸಲು ದೇಶಗಳು ಪ್ರಯತ್ನ ಪಡುತ್ತಿವೆ. ಸಾವಿರ ಸಾವಿರದ ಸಂಖ್ಯೆಯಲ್ಲಿ ಜೀವಗಳು ವೆಂಟಿಲೇಟರಿನ ತುದಿಯಲ್ಲಿ ಉಸಿರು ಕಳೆದುಕೊಳ್ಳುತ್ತಿರುವಾಗ ದೇಶ, ಖಂಡಗಳಿಗೆಲ್ಲ ನಡುಕ ಹುಟ್ಟಿಸಿರುವ ಈ ಕಣ್ಣಿಗೆ ಕಾಣದ ರೋಗಾಣುವಿನ ಶಕ್ತಿಯಾದರೂ ಎಂಥದ್ದು ಎಂದು ಸೋಜಿಗ ಆಗದೇ ಇರದು.

ಮನೆಯಲ್ಲೇ ಇರಬೇಕು ಎನ್ನುವುದು ಸರ್ಕಾರದ ಆಜ್ಞೆ. ಅದಕ್ಕೆ ಅನುವು ಮಾಡಲೆಂದು ಲಾಕ್‍ಡೌನ್ ಕೂಡ ಆಗಿದೆ. ಯಾರೂ ಕಾರಣ ಇಲ್ಲದೆ, ಸೂಕ್ತ ಪಾಸ್ ಅಥವಾ ಅನುಮತಿ ಇಲ್ಲದೆ ಓಡಾಡುವಂತಿಲ್ಲ. ಇದೆಲ್ಲಾ ಕಣ್ಣಿಗೆ ಕಾಣದ ರೋಗಾಣುವಿನ ಮುಷ್ಠಿಯಿಂದ ದೂರ ಇರುವ ಯತ್ನ. ಇದು ಒಂದು ಹಂತದ ಹೋರಾಟ. ಇನ್ನೊಂದು ಹಂತದ ಹೋರಾಟ ಎಂದರೆ ದಿನಬೆಳಗಾದರೆ ಮನೆಯಿಂದ ಹೊರಗೆ ಬಿದ್ದು ತಂತಮ್ಮ ಕೆಲಸಕ್ಕೆ ಹೋಗಿ ಬಂದು ಮಾಡಿಕೊಂಡು ದುಡಿದು ಉಣ್ಣುತ್ತಿದ್ದ ಜನ ಒಮ್ಮಿಂದೊಮ್ಮೆಲೆ ತಮ್ಮ ಸಾಮಾಜಿಕ ಚೌಕಟ್ಟಿನಿಂದ ಹೊರಗೆ ನಿಂತು ನೀರಿನಿಂದ ಹೊರಕ್ಕೆ ಹಾಕಿದ ಮೀನಿನಂತೆ ಚಡಪಡಿಸುತ್ತಿದ್ದಾರೆ. ಇದರಲ್ಲಿ ಹೆಣ್ಣು, ಗಂಡು, ಮಗು ಎಂಬ ಭೇದವಿಲ್ಲ.

ಆಧುನಿಕ ಸಮಾಜದಲ್ಲಿ ಬದುಕುತ್ತಿರುವ ಮನುಷ್ಯನ ಮೊದಲ ಓಟ ಮನೆಯಿಂದ ಹೊರಗೆ ಹೋಗುವಲ್ಲಿ ಶುರುವಾಗಿ, ಸಮಾಜದ ವಿವಿಧ ಆಯಾಮಗಳನ್ನು ಅನುಭವಿಸಿ ಮನೆಗೆ ವಾಪಾಸ್ ಮರಳುವಲ್ಲಿ ಕೊನೆಯ ಓಟದೊಂದಿಗೆ ಪರ್ಯವಸಾನಗೊಳ್ಳುತ್ತದೆ.

ಮನೆ ಎಂಬುದೊಂದು ತಾಣ. ಸುರಕ್ಷತೆಯ ಭರವಸೆಯನ್ನು ನಿಸ್ಸಂದೇಹವಾಗಿ, ನಿರುದ್ವಿಗ್ನವಾಗಿ, ಯಾವುದೇ ಷರತ್ತುಗಳಿಗೆ ಒಳಪಡಿಸದೆ ಸಮಾಧಾನವನ್ನು ಕೊಡುವ ಮೊಟ್ಟಮೊದಲ ಮತ್ತು ಕಟ್ಟಕಡೆಯ ಜಾಗ ಎನ್ನುವುದು ಸರ್ವವಿದಿತ.

ಆದರೆ ಈ ಮನೆಯೇ ಒಂದು ಹಿಂಸೆಯ ಕಾರ್ಯಸ್ಥಾನವಾಗಿ ಮಾರ್ಪಟ್ಟರೆ?

ಬೇಲಿಯೇ ಎದ್ದು ಹೊಲ ಮೆಯ್ದರೆ? ಪದ ಕುಸಿಯೆ ನೆಲವಿಹುದು, ಮತ್ತೆ ನೆಲವೇ ಕುಸಿದು ಹೋದರೆ?

ಈ ಅಂಕಿಅಂಶಗಳನ್ನು ಗಮನಿಸಿ.

* ಲಾಕ್ಡೌನ್ ಆದ ಕೆಲವೇ ದಿನಗಳಲ್ಲಿ ಮಕ್ಕಳ ಸಹಾಯವಾಣಿಗೆ ಬಂದ ದೂರುಗಳ ಸಂಖ್ಯೆ 92,000!

* ಮಕ್ಕಳನ್ನು ಬಳಸಿ ಸೃಷ್ಟಿಸಲಾಗುವ ಲೈಂಗಿಕ ಚಿತ್ರಗಳಿಗೆ 95% ಹೆಚ್ಚು ಬೇಡಿಕೆ. (ಈ ಸಂಬಂಧ ಭಾರತ ಸರ್ಕಾರ ತಂತ್ರಜ್ಞಾನ ಕಂಪನಿಗಳಾದ ಗೂಗಲ್ ಮತ್ತು ವಾಟ್ಸಾಪಿಗೆ ದೂರು ಸಲ್ಲಿಸಿದೆ)

* ಮಹಿಳೆಯರ ಮೇಲೆ ಆಗುವ ಕೌಟುಂಬಿಕ ಹಿಂಸೆಯಲ್ಲಿ ಜಗತ್ತಿನಾದ್ಯಂತ ಕನಿಷ್ಠ 15 ಮಿಲಿಯನ್ ಹೆಚ್ಚುವರಿ ಕೇಸುಗಳಾಗಿವೆ. ಇವೆಲ್ಲವೂ ಕೋವಿಡ್ ಸಂಬಂಧಿತ ಲಾಕ್‍ಡೌನ್ ಸಮಯದಲ್ಲಿ ರಿಜಿಸ್ಟರ್ ಆದಂಥವು.

* ಲಾಕ್‍ಡೌನ್ ಶುರುವಾದ ಕೆಲವೇ ದಿನಗಳಲ್ಲಿ ಭಾರತದ ಪೋಲಿಸ್ ಸ್ಟೇಷನ್ನುಗಳಲ್ಲಿ ಮತ್ತು ಸಹಾಯವಾಣಿಗಳ ಮೂಲಕ ದಾಖಲಾದ ದೂರುಗಳ ಸಂಖ್ಯೆ ಸಾವಿರ ದಾಟಿದೆ. ಲಾಕ್‍ಡೌನ್ ತೆರವಾಗುವ ಹೊತ್ತಿಗೆ ಈ ಸಂಖ್ಯೆ ಕನಿಷ್ಠ ನಾಲ್ಕು ಪಟ್ಟು ಹೆಚ್ಚಬಹುದು ಎಂದು ಅಂದಾಜಿಸಲಾಗಿದೆ.

ಇದಕ್ಕೆ ಕಾರಣಗಳು ಹಲವಾರು. ಮನೆಯಲ್ಲೇ ಬಂಧಿಯಾಗಬೇಕಾದ ಸಂದರ್ಭದಲ್ಲಿ, ಕಾನೂನು ವ್ಯವಸ್ಥೆಯಲ್ಲಿ ಇರುವ ಏಜೆನ್ಸಿಗಳು `ಪೋಲಿಸ್, ಸಹಾಯವಾಣಿ, ವಕೀಲರು, ಕೋರ್ಟು ಇತ್ಯಾದಿ’ ಎಲ್ಲವೂ ದೇಶದ ಜನರನ್ನು ಮನೆಯ ಒಳಗೆ ಇರಿಸಲು ಹರಸಾಹಸ ಪಡುತ್ತಿವೆ. ಇದರ ಪರಿಣಾಮವಾಗಿ ಬೇರೆ ನಮೂನೆಯ ಸಮಸ್ಯೆಗಳಿಗೆ ಗಮನ ಹರಿಸುವುದು ಸದ್ಯದ ಅವಶ್ಯಕತೆ ಅಲ್ಲ.

ಊರಿಂದ ಊರಿಗೆ ಪ್ರಯಾಣ ಸಾಧ್ಯವೇ ಇಲ್ಲದಿರುವುದರಿಂದ ಹಿಂಸೆ ಉಂಟಾದ ಸಮಯದಲ್ಲಿ ಯಾರೊಬ್ಬರ ಸಹಾಯಕ್ಕೆ ಇನ್ನೊಬ್ಬರು ಬರಲಾಗದಂತಹ ವಾತಾವರಣ ಇದೆ.

ಈಗ ನಾವು ಎದುರಿಸುತ್ತಿರುವುದು ಒಂದು ಭಯಾನಕ ಮತ್ತು ಅಪರೂಪದ ಘಟಿತ. ಇದು ನಮಗೆ ಈ ಮಟ್ಟದಲ್ಲಿ ಹಿಂದೆಂದೂ ಬೆದರಿಸಿರಲಿಲ್ಲ. ಎಲ್ಲರೂ ಮನೆಯಲ್ಲಿ ದಿನಗಟ್ಟಲೇ ಇರಬೇಕಾಗಿ ಬಂದಾಗ ಎಂತಹ ಅನ್ಯೋನ್ಯ ಪರಿವಾರ ಎಂದುಕೊಂಡರೂ ಒಬ್ಬರಿಗೊಬ್ಬರು ತಿಕ್ಕಾಟ ಆಗಿಬಿಡುವುದು ಅತ್ಯಂತ ಸಹಜವಾದ ವಿಷಯ. ಇದನ್ನು ತಿಳಿಹೇಳಲು ನಮ್ಮಲ್ಲಿ ಮಾನಸಿಕ ತಜ್ಞರು ಸನ್ನದ್ಧರಿಲ್ಲ.…ಒಂದು ಪಕ್ಷ ಕೆಲವು ಊರುಗಳಲ್ಲಿ ಇದ್ದರೂ ಅವರ ಹತ್ತಿರ ಯಾವ ರೀತಿಯಲ್ಲಿ ತಮ್ಮ ಸಮಸ್ಯೆಯನ್ನು ವೈಯಕ್ತಿಕವಾಗಿಸದಂತೆ ಹೇಳಿಕೊಳ್ಳಬಹುದು ಎನ್ನುವ ತಯಾರಿ ಬಹುತೇಕ ಜನಕ್ಕೆ ಇಲ್ಲ.

ಯಾಕೆಂದರೆ ಎಲ್ಲರೂ ಹೊರಗಿನ ಸೂಕ್ಷ್ಮಾಣುಜೀವಿಯನ್ನು ಸೋಲಿಸುವಲ್ಲಿ ನಿರತರಾಗಿದ್ದೇವೆಯೇ ಹೊರತು ಮನೆಯೊಳಗಿನ ಸೂಕ್ಷ್ಮ ವಾತಾವರಣವನ್ನು ನಿಭಾಯಿಸುವ ತಯಾರಿ ಮಾಡಿಕೊಂಡೇ ಇಲ್ಲ. ಇದು ಮುಖ್ಯ ಎಂದು ಸರ್ಕಾರಕ್ಕೂ ಅನ್ನಿಸದೇ ಹೋಗಿರಬೇಕು.

ಮದ್ಯದಂಗಡಿಗಳು ಲಾಕ್‍ಡೌನ್ ಸಮಯದಲ್ಲಿ ದಿಢೀರನೆ ಮುಚ್ಚಿರುವ ಪ್ರಯುಕ್ತ ಮನೆಗಳಲ್ಲಿ ಮದ್ಯ, ಸಾರಾಯಿಯ ಮೇಲೆ ಅವಲಂಬಿತರಾಗಿರುವವರ ಗತಿ ತೀರಾ ಕಷ್ಟದಲ್ಲಿದೆ.

ಹಾಗಂತ ಸಾರಾಯಿ ಸಿಗುತ್ತಲೇ ಇಲ್ಲ ಎಂತಲೂ ಹೇಳಲಾಗದು. ಲಾಕ್‍ಡೌನ್ ಆದ ಮೊದಲ ದಿನಗಳನ್ನು ಹೊರತುಪಡಿಸಿದರೆ ಸಾರಾಯಿ/ಮದ್ಯ ಮೊದಲಿಗಿಂತ ನಾಲ್ಕೈದು ಪಟ್ಟು ಹೆಚ್ಚು ದುಬಾರಿಯಾಗಿ ಬಡವರ ಕೈಗೆ ಸಿಗುತ್ತಿದೆ. ಸರ್ಕಾರ ಅನ್ನ, ಬೇಳೆಯ ವ್ಯವಸ್ಥೆಯನ್ನೇನೋ ಮಾಡುತ್ತಿದೆ. ಅದಕ್ಕಾಗಿ ಧನ್ಯವಾದಗಳನ್ನು ಹೇಳಿಬಿಡೋಣ. ಆದರೆ ಮದ್ಯಕ್ಕೆ ಐದು-ಹತ್ತು ಪಟ್ಟು ಹೆಚ್ಚು ಬೆಲೆ ತೆತ್ತು ತರುವಾಗ ಮನೆಯಲ್ಲಿ ಒಂದು ಬಗೆಯ ಘರ್ಷಣೆ ಆಗುವುದು ಬಹು ಸಾಮಾನ್ಯ ಸಂಗತಿ.

ದುಡಿಮೆಯೇ ಇಲ್ಲದೆ ಇರುವ ದಿನಗಳಲ್ಲಿ ಇದ್ದ ಬದ್ದ ಪುಡಿಗಾಸನ್ನು ಯಾವ ಎಗ್ಗೂ ಇಲ್ಲದೆ ಹೆಂಡಕ್ಕೆ ಸುರಿಯುವಾಗ ಹೆಂಡತಿ ಮಕ್ಕಳ ಮನಸ್ಸಿನಲ್ಲಿ ಉಂಟಾಗುವ ಆತಂಕ ಕೆಳ ಮಧ್ಯಮವರ್ಗದಲ್ಲಿ, ಶ್ರಮಿಕ ಜನಗಳಲ್ಲಿ ಜಗಳದ ಸ್ವರೂಪ ಪಡೆಯದೇ ಇದ್ದೀತೆ? ಇದರ ನೇರ ಪರಿಣಾಮವಾಗಿ ಕೌಟುಂಬಿಕ ಹಿಂಸೆಯ ಹೆಚ್ಚಳ ನೇರವಾಗಿಯೇ ಆಗುತ್ತದೆ.

ಇನ್ನು ಪೀಡೋಫೈಲ್ಸ್ ಅಥವಾ ಶಿಶುಕಾಮಿಗಳ ಸಂಗತಿಯಂತೂ ಭಯಾನಕವಾದದ್ದು. ಅವರಿಗೆ ಸಿಗುವ ಅವಕಾಶಗಳು ಅಪರಿಮಿತ. ಕೈಯ್ಯಲ್ಲಿ ಅವರ ಮಾನಸಿಕ ವಾಂಛೆಯನ್ನು ತೀರಿಸಲು ಡೇಟಾ ತುಂಬಿದ ಮೊಬೈಲ್ ಇದೆ. ಶಿಶುಕಾಮದ ಚಿತ್ರಗಳೂ ಅಂತರ್ಜಾಲದಲ್ಲಿ ಹೇರಳವಾಗಿವೆ. ಅವುಗಳನ್ನು ಹೆಕ್ಕಿ ಕೊಡಲು ಗೂಗಲ್‍ನಂತಹ ಸರ್ಚ್ ಎಂಜಿನುಗಳಿವೆ. ಮತ್ತೆ ಇದನ್ನೆಲ್ಲಾ ಅನುಭವಕ್ಕೆ ಇಳಿಸಲು ಮನೆಯಲ್ಲಿ ಮಕ್ಕಳಿದ್ದಾರೆ. ಅವರೀಗ ಅಸಹಾಯಕರು. ಯಾರ ಹತ್ತಿರವೂ ಸಹಾಯಕ್ಕೆ ಅಥವಾ ಬೆಂಬಲಕ್ಕೆ ಹೋಗಲಾರರು. ಹೋದರೂ ಅವರಿಗೆ ಸಹಾಯ ಸಿಗುವ ಸಂಭವವೇ ಇಲ್ಲ, ಯಾಕೆಂದರೆ ಎಲ್ಲರ ಮನಸ್ಸಿನಲ್ಲಿ ಈಗ ಕೋವಿಡ್ ತುಂಬಿದೆ. ಯಾವ ರಕ್ಷಣಾ ವ್ಯವಸ್ಥೆಯೂ ಈಗ ಶಿಶುಕಾಮಿಗಳ ಬಗ್ಗೆ ತಲೆ ಕೆಡಿಸಿಕೊಳ್ಳುವಷ್ಟು ವ್ಯವಧಾನ ಹೊಂದಿಲ್ಲ. ಇದರ ಪರಿಣಾಮವಾಗಿ ಆಗಲೇ ದುರ್ಬಲವಿರುವ ಮುಗ್ಧ “ಬಲಿ”ಗಳು ಇನ್ನಷ್ಟು ದುರ್ಬಲವಾಗಿವೆ. ಮಕ್ಕಳಿಗೀಗ ರಕ್ಷಣೆಯೇ ಇಲ್ಲ. ಯಾಕೆಂದರೆ, ಸಮಾಜದ, ಸರ್ಕಾರದ ಪ್ರಕಾರ ಮನೆ ಇಂದು ‘ಸುರಕ್ಷಿತ’ ತಾಣ.

ಇದು ಬಹುಪಾಲು ಅಥವಾ ಕೆಲವು ಪಾಲು ಜನಸಂಖ್ಯೆಗೆ ಸತ್ಯವೇ ಇರಬಹುದು. ಆದರೆ ಇದೇ ಸಮಾಜಕ್ಕೆ, ದೇಶಕ್ಕೆ ಸೇರಿದ ಜನಸಂಖ್ಯೆಯ ಘಟಕ ಇದು. ಇದರ ಸಂಖ್ಯೆ ಕಡಿಮೆಯೋ ಜಾಸ್ತಿಯೋ ಹೇಳಲಾಗದು. ಆದರೆ ಇಲ್ಲಿ ಇರುವ ಮನಸುಗಳು, ವ್ಯಕ್ತಿಗಳು, ಮುಂದೂ ಇದೇ ಸಮಾಜದ ಭಾಗವಾಗಿ ಮುಂದುವರೆಯುತ್ತಾರೆ. ಚಿಕ್ಕಂದಿನ ಆಘಾತ, ಅನುಭವಿಸಿದ ಹಿಂಸೆ ಮುಂದೆ ಇನ್ಯಾವುದೋ ರೂಪ ತಾಳಿ ಅವರ ಮುಂದಿನ ಪೀಳಿಗೆಗೆ ಮಾರಕವಾಗಲಾರದೇ?

ವಿಷವನ್ನೇ ಬಿತ್ತಿ ವಿಷವನ್ನೇ ಬೆಳೆಯುವ ಈ ವ್ಯವಸ್ಥೆಯೊಳಗೆ ಹೊಸ ಭರವಸೆಯ ಬೆಳಕು ಹಿಂಸೆಯ ಮಧ್ಯದಿಂದಲೇ ಆರಂಭವಾದರೆ ಅದರ ಪರ್ಯವಸಾನ ಹೇಗೆ ಆಗಬಹುದು ಎನ್ನುವುದು ಎಂಥವರೂ ಯೋಚಿಸಬಹುದಾದ ಮತ್ತು ಯೋಚಿಸಲೇಬೇಕಾದ ವಿಚಾರ.

ಕೋವಿಡ್ ಲಾಕ್ಡೌನ್ ಮುಗಿದ ನಂತರ ಈ ವೈರಸ್ಸಿನ ಹಿಡಿತದಿಂದ ಮನುಷ್ಯಕುಲವನ್ನು ರಕ್ಷಿಸುವುದು ಹೇಗೆ ಎಂದು ಸರ್ಕಾರಗಳು ಯೋಚಿಸುವಾಗ ಸರ್ಕಾರಗಳು ಕೌಟುಂಬಿಕ ಹಿಂಸೆಯ ಬಗ್ಗೆ ದಾಖಲಾದ ದೂರುಗಳನ್ನೂ ಅತ್ಯಂತ ಕಾಳಜಿಯಿಂದ ನೋಡಬೇಕಾಗುತ್ತದೆ.

ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಇಲ್ಲದೆ ಇರುವ ಸಂದರ್ಭದಲ್ಲಿ ಮಧ್ಯಮವರ್ಗದಿಂದ ಹಿಡಿದು ಕೆಳವರ್ಗದವರೆಗೂ ಮಹಿಳೆಯ ಮತ್ತು ಮಕ್ಕಳ ಸುರಕ್ಷೆಯ ಜವಾಬ್ದಾರಿಯನ್ನು ವ್ಯವಸ್ಥೆ ಮತ್ತು ಸರ್ಕಾರ ಹೊರದೇ ಹೋದರೆ, ದೇಹಕ್ಕೆ ಅಂಟುವ ವೈರಸ್ಸೇನೋ ಕೊನೆಯಾದೀತು. ಅದು ಹೋಗುವಾಗ ಸಮಾಜವನ್ನು ಮತ್ತಷ್ಟು ರೋಗಗ್ರಸ್ತ ಮಾಡಿ ಹೋಗುವುದು ಖಾತ್ರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಬೆಂಗಳೂರಿನಂತ ದೊಡ್ಡ ಊರುಗಳಲ್ಲಿ ೨೪ ತಾಸು ಮನೆಯಲ್ಲೇ ಉಳಿಯುವಂತಾ ಅಗಲವಾದ ಮನೆಗಳಿವೆಯೇ ಎಂಬುದನ್ನೂ ನೋಡಬೇಕು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...