Homeಕರ್ನಾಟಕಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

- Advertisement -
- Advertisement -

ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಯಾವುದೇ ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ನಡೆದ “ಕೃಷಿ ಕಾಯಕದ ರಾಯಭಾರಿ”  ಕಾರ್ಯಕ್ರಮದಲ್ಲಿ ರಾಯಭಾರಿಯಾಗಿ ಆಹ್ವಾನ ಸ್ವೀಕರಿಸಿದ್ದಾರೆ.

“ಚಿತ್ರರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ಚಿತ್ರ ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

“ಇದು ಕೃಷಿ ಇಲಾಖೆಯ ಅಭೂತಪೂರ್ವ ಕಾರ್ಯಕ್ರಮ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ ಪಶುಸಂಗೋಪನೆ ಚಟುವಟಿಕೆಗಳನ್ನೂ ನಡೆಸುತ್ತಿರುವ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ” ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

’ರಾಜ್ಯ ಕೃಷಿ ಇಲಾಖೆಯ ಯೋಜನೆಗಳನ್ನು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಮತ್ತು ಕೃಷಿ ಬಗ್ಗೆ ಯುವಜನತೆಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಜನಪ್ರಿಯ ನಟ, ಹೃದಯವಂತ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿದರು’ ಎಂದು ಕಾರ್ಯಕ್ರಮದ ಛಾಯಾಚಿತ್ರಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

‘ದರ್ಶನ್ ನಟನೆಯ “ರಾಬರ್ಟ್” ಚಿತ್ರವನ್ನು ನೋಡುವುದಾಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಬಿ.ಸಿ.ಪಾಟೀಲ್ ಹೇಳಿದರು. ’ನಾನು ಅಧುನಿಕ ಕೌರವನಾಗಿ ನಟನೆ ಮಾಡಿದ್ದೆ. ಆದರೆ ದರ್ಶನ್ ಪೌರಾಣಿಕ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11ರಂದು “ರಾಬರ್ಟ್” ಚಿತ್ರ ಬಿಡುಗಡೆ ಆಗಲಿದ್ದು ಚಿತ್ರ ಸೂಪರ್ ಸೂಪರ್ ಹಿಟ್ ಆಗಲಿ’ ಎಂದು ಸಚಿವ ಬಿ.ಸಿ.ಪಾಟೀಲ್ ಹಾರೈಸಿದರು.

ಎರಡು ವಾರಗಳ ಹಿಂದೆಯೇ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯಾಗಿ ಘೋಷಿಸಲಾಗಿತ್ತು. ಇಂದು ಅಧಿಕೃತವಾಗಿ ಆಹ್ವಾನ ಸ್ವೀಕರಿಸಿದ್ದಾರೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...