Homeಕರ್ನಾಟಕಆರ್ಥಿಕ ದೌರ್ಜನ್ಯ ಖಂಡಿಸಿ 'ಚಲೋ ದಿಲ್ಲಿ' ಚಳವಳಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

ಆರ್ಥಿಕ ದೌರ್ಜನ್ಯ ಖಂಡಿಸಿ ‘ಚಲೋ ದಿಲ್ಲಿ’ ಚಳವಳಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

- Advertisement -
- Advertisement -

ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯ ಖಂಡಿಸಿ ಕರ್ನಾಟಕ ಸರ್ಕಾರದಿಂದ ನಾಳೆ ‘ಚಲೋ ದಿಲ್ಲಿ’ ಚಳವಳಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರು ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಲಿದ್ದಾರೆ. ಈಗಾಗಲೇ ಪ್ರತಿಪಕ್ಷ ಬಿಜೆಪಿ ನಾಯಕರನ್ನು ಆಹ್ವಾನಿಸಿರುವ ಸಿಎಂ, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ‘ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ವಿರುದ್ಧ ಧ್ವನಿಯೆತ್ತುತ್ತೇವೆ. ಈ ಚಳವಳಿ ಯಾರ ವಿರುದ್ಧವೂ ಅಲ್ಲ, ಇದು ಕರುನಾಡು ಹಾಗೂ ಕನ್ನಡಿಗರ ಹಿತಕ್ಕಾಗಿ. ಪಕ್ಷಾತೀತವಾಗಿ ಎಲ್ಲರೂ ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇವೆ’ ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ‘ಒ೦ದು ವಿಶೇಷ ಸ೦ದರ್ಭದಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು
ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸ೦ಸದರು ಸೇರಿ ದೆಹಲಿಯ ಜ೦ತರ್‌ ಮಂತರ್‌ನಲ್ಲಿ ಫೆಬ್ರವರಿ, 07 ರಂದು ಒ೦ದು ದಿನದ ಧರಣಿ ಸತ್ಯಾಗಹವನ್ನು ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಕರ್ನಾಟಕಕ್ಕ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ, ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿ೦ದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ’ ಎಂದು ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದಾರೆ.

‘ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ. ದೇವೇಗೌಡ, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಡಿಸಿ ಸದಾನಂದಗೌಡ, ಅವರು ಸೇರಿದಂತೆ ದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಎಲ್ಲ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ’ ಎಂದು ಹೇಳಿದ್ದಾರೆ.

‘ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ’ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ; ‘ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ, ನೀವೂ ಧ್ವನಿಯಾಗಿ’; ಕೇಂದ್ರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿಯನ್ನು ಆಹ್ವಾನಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...