ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ-ಕಾಲೇಜುಗಳಲ್ಲಿ ಮತ ಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ. ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಬರೆದುಕೊಂಡಿದೆ.
ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಕೇಸರಿ ಶಾಲು ಹಾಕಿಕೊಂಡು ಕಾಲೇಜೊಂದರ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿರುವುದನ್ನು ಕಾಣಬಹುದು.
ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್ರಿಗೆ ಆಹ್ವಾನ