Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...