Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...