Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...