Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...