Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...