Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...