Homeದಲಿತ್ ಫೈಲ್ಸ್ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ಸವರ್ಣೀಯ ವ್ಯಕ್ತಿಯೊಬ್ಬ
ಇಡೀ ಟ್ಯಾಂಕಿನ ನೀರು ಖಾಲಿ ಮಾಡಿ, ಗೋಮೂತ್ರ ಸಿಂಪಡಿಸಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ
ಘಟನೆ ಚಾಮರಾಜನಗರ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ.

ನವೆಂಬರ್ 18ರ ಶುಕ್ರವಾರ ಹೆಗ್ಗೊಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಯುವಕನ ಮದುವೆ ನಡೆದಿತ್ತು. ಹೆಣ್ಣಿನ ಕಡೆಯವರು ಗ್ರಾಮಕ್ಕೆ ಮದುವೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಲಿತ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿನ ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದಿದ್ದಾರೆ. ಇದನ್ನು ನೋಡಿದ ಸವರ್ಣೀಯ ವ್ಯಕ್ತಿಯೊಬ್ಬ ಮೇಲಿನ ದುಷ್ಕೃತ್ಯ ಎಸಗಿದ್ದಾರೆ ಎಂದು ರಘು ನಾಯಕ್ ಎಂಬುವವರು ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ದಲಿತ ಮಹಿಳೆಯೊಬ್ಬರು ತೊಂಬೆ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ವೀರಶೈವ ಸಮೂದಾಯದವನೊಬ್ಬ ಇಡೀ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಹಸುವಿನ ಉಚ್ಛೆ ಸಿಂಪಡಿಸಿ ಸ್ವಚ್ಛ ಮಾಡಿದ
ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 11km ಅಂತರದಲ್ಲಿರುವ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ….. ಇಂತಹ ಅಸಹ್ಯ ಮನಸ್ಥಿಯನ್ನ ನೋಡಿಯೂ ಅದು ಹೇಗೆ ನಾವೆಲ್ಲ ಒಂದೆನಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೂರಾರು ಜನರು ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುವವರು ಈಗ ಎಲ್ಲಿದ್ದಾರೆ? ಅಸ್ಪೃಶ್ಯತೆ ಇಲ್ಲ ಎನ್ನುವವರೆ ಎಲ್ಲಿದ್ದಾರೆ, ಬನ್ನಿ ಇಲ್ಲಿ ನೋಡಿ. ಇದು ಸರಿಯೇ ಎಂದು ತೀರ್ಮಾನಿಸಿ. ಬಸವಣ್ಣನವರ ನಿಜ ಆಶಯಗಳನ್ನು ಮರೆತು ಜಾತಿ ಪದ್ದತಿ ಆಚರಿಸುತ್ತಿರುವವರು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಲವು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಸ್ಫೃಶ್ಯತೆ ಆಚರಣೆ ವಿಡಿಯೋ ಹರಿದಾಡುತ್ತಿದ್ದಂತೆ ತಹಶೀಲ್ದಾರರ ಗಮನಕ್ಕೂ ಬಂದಿದೆ. ಅವರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಾಧಿಕಾಗಿಉ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿ ವಿಚಾರಣೆ ನಡೆಸುತ್ತೇವೆ. ಘಟನೆ ನಡೆದಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಐ.ಇ ಬಸವರಾಜು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, “ಶನಿವಾರ ಸಂಜೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ವಾಸ್ತವಾಂಶ ಗೊತ್ತಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದೇನೆ. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...