Homeದಲಿತ್ ಫೈಲ್ಸ್ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ಸವರ್ಣೀಯ ವ್ಯಕ್ತಿಯೊಬ್ಬ
ಇಡೀ ಟ್ಯಾಂಕಿನ ನೀರು ಖಾಲಿ ಮಾಡಿ, ಗೋಮೂತ್ರ ಸಿಂಪಡಿಸಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ
ಘಟನೆ ಚಾಮರಾಜನಗರ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ.

ನವೆಂಬರ್ 18ರ ಶುಕ್ರವಾರ ಹೆಗ್ಗೊಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಯುವಕನ ಮದುವೆ ನಡೆದಿತ್ತು. ಹೆಣ್ಣಿನ ಕಡೆಯವರು ಗ್ರಾಮಕ್ಕೆ ಮದುವೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಲಿತ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿನ ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದಿದ್ದಾರೆ. ಇದನ್ನು ನೋಡಿದ ಸವರ್ಣೀಯ ವ್ಯಕ್ತಿಯೊಬ್ಬ ಮೇಲಿನ ದುಷ್ಕೃತ್ಯ ಎಸಗಿದ್ದಾರೆ ಎಂದು ರಘು ನಾಯಕ್ ಎಂಬುವವರು ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ದಲಿತ ಮಹಿಳೆಯೊಬ್ಬರು ತೊಂಬೆ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ವೀರಶೈವ ಸಮೂದಾಯದವನೊಬ್ಬ ಇಡೀ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಹಸುವಿನ ಉಚ್ಛೆ ಸಿಂಪಡಿಸಿ ಸ್ವಚ್ಛ ಮಾಡಿದ
ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 11km ಅಂತರದಲ್ಲಿರುವ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ….. ಇಂತಹ ಅಸಹ್ಯ ಮನಸ್ಥಿಯನ್ನ ನೋಡಿಯೂ ಅದು ಹೇಗೆ ನಾವೆಲ್ಲ ಒಂದೆನಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೂರಾರು ಜನರು ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುವವರು ಈಗ ಎಲ್ಲಿದ್ದಾರೆ? ಅಸ್ಪೃಶ್ಯತೆ ಇಲ್ಲ ಎನ್ನುವವರೆ ಎಲ್ಲಿದ್ದಾರೆ, ಬನ್ನಿ ಇಲ್ಲಿ ನೋಡಿ. ಇದು ಸರಿಯೇ ಎಂದು ತೀರ್ಮಾನಿಸಿ. ಬಸವಣ್ಣನವರ ನಿಜ ಆಶಯಗಳನ್ನು ಮರೆತು ಜಾತಿ ಪದ್ದತಿ ಆಚರಿಸುತ್ತಿರುವವರು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಲವು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಸ್ಫೃಶ್ಯತೆ ಆಚರಣೆ ವಿಡಿಯೋ ಹರಿದಾಡುತ್ತಿದ್ದಂತೆ ತಹಶೀಲ್ದಾರರ ಗಮನಕ್ಕೂ ಬಂದಿದೆ. ಅವರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಾಧಿಕಾಗಿಉ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿ ವಿಚಾರಣೆ ನಡೆಸುತ್ತೇವೆ. ಘಟನೆ ನಡೆದಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಐ.ಇ ಬಸವರಾಜು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, “ಶನಿವಾರ ಸಂಜೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ವಾಸ್ತವಾಂಶ ಗೊತ್ತಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದೇನೆ. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...