Homeದಲಿತ್ ಫೈಲ್ಸ್ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ಸವರ್ಣೀಯ ವ್ಯಕ್ತಿಯೊಬ್ಬ
ಇಡೀ ಟ್ಯಾಂಕಿನ ನೀರು ಖಾಲಿ ಮಾಡಿ, ಗೋಮೂತ್ರ ಸಿಂಪಡಿಸಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ
ಘಟನೆ ಚಾಮರಾಜನಗರ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ.

ನವೆಂಬರ್ 18ರ ಶುಕ್ರವಾರ ಹೆಗ್ಗೊಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಯುವಕನ ಮದುವೆ ನಡೆದಿತ್ತು. ಹೆಣ್ಣಿನ ಕಡೆಯವರು ಗ್ರಾಮಕ್ಕೆ ಮದುವೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಲಿತ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿನ ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದಿದ್ದಾರೆ. ಇದನ್ನು ನೋಡಿದ ಸವರ್ಣೀಯ ವ್ಯಕ್ತಿಯೊಬ್ಬ ಮೇಲಿನ ದುಷ್ಕೃತ್ಯ ಎಸಗಿದ್ದಾರೆ ಎಂದು ರಘು ನಾಯಕ್ ಎಂಬುವವರು ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ದಲಿತ ಮಹಿಳೆಯೊಬ್ಬರು ತೊಂಬೆ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ವೀರಶೈವ ಸಮೂದಾಯದವನೊಬ್ಬ ಇಡೀ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಹಸುವಿನ ಉಚ್ಛೆ ಸಿಂಪಡಿಸಿ ಸ್ವಚ್ಛ ಮಾಡಿದ
ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 11km ಅಂತರದಲ್ಲಿರುವ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ….. ಇಂತಹ ಅಸಹ್ಯ ಮನಸ್ಥಿಯನ್ನ ನೋಡಿಯೂ ಅದು ಹೇಗೆ ನಾವೆಲ್ಲ ಒಂದೆನಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೂರಾರು ಜನರು ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುವವರು ಈಗ ಎಲ್ಲಿದ್ದಾರೆ? ಅಸ್ಪೃಶ್ಯತೆ ಇಲ್ಲ ಎನ್ನುವವರೆ ಎಲ್ಲಿದ್ದಾರೆ, ಬನ್ನಿ ಇಲ್ಲಿ ನೋಡಿ. ಇದು ಸರಿಯೇ ಎಂದು ತೀರ್ಮಾನಿಸಿ. ಬಸವಣ್ಣನವರ ನಿಜ ಆಶಯಗಳನ್ನು ಮರೆತು ಜಾತಿ ಪದ್ದತಿ ಆಚರಿಸುತ್ತಿರುವವರು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಲವು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಸ್ಫೃಶ್ಯತೆ ಆಚರಣೆ ವಿಡಿಯೋ ಹರಿದಾಡುತ್ತಿದ್ದಂತೆ ತಹಶೀಲ್ದಾರರ ಗಮನಕ್ಕೂ ಬಂದಿದೆ. ಅವರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಾಧಿಕಾಗಿಉ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿ ವಿಚಾರಣೆ ನಡೆಸುತ್ತೇವೆ. ಘಟನೆ ನಡೆದಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಐ.ಇ ಬಸವರಾಜು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, “ಶನಿವಾರ ಸಂಜೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ವಾಸ್ತವಾಂಶ ಗೊತ್ತಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದೇನೆ. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...