Homeದಲಿತ್ ಫೈಲ್ಸ್ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ಸವರ್ಣೀಯ ವ್ಯಕ್ತಿಯೊಬ್ಬ
ಇಡೀ ಟ್ಯಾಂಕಿನ ನೀರು ಖಾಲಿ ಮಾಡಿ, ಗೋಮೂತ್ರ ಸಿಂಪಡಿಸಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ
ಘಟನೆ ಚಾಮರಾಜನಗರ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ.

ನವೆಂಬರ್ 18ರ ಶುಕ್ರವಾರ ಹೆಗ್ಗೊಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಯುವಕನ ಮದುವೆ ನಡೆದಿತ್ತು. ಹೆಣ್ಣಿನ ಕಡೆಯವರು ಗ್ರಾಮಕ್ಕೆ ಮದುವೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಲಿತ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿನ ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದಿದ್ದಾರೆ. ಇದನ್ನು ನೋಡಿದ ಸವರ್ಣೀಯ ವ್ಯಕ್ತಿಯೊಬ್ಬ ಮೇಲಿನ ದುಷ್ಕೃತ್ಯ ಎಸಗಿದ್ದಾರೆ ಎಂದು ರಘು ನಾಯಕ್ ಎಂಬುವವರು ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ದಲಿತ ಮಹಿಳೆಯೊಬ್ಬರು ತೊಂಬೆ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ವೀರಶೈವ ಸಮೂದಾಯದವನೊಬ್ಬ ಇಡೀ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಹಸುವಿನ ಉಚ್ಛೆ ಸಿಂಪಡಿಸಿ ಸ್ವಚ್ಛ ಮಾಡಿದ
ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 11km ಅಂತರದಲ್ಲಿರುವ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ….. ಇಂತಹ ಅಸಹ್ಯ ಮನಸ್ಥಿಯನ್ನ ನೋಡಿಯೂ ಅದು ಹೇಗೆ ನಾವೆಲ್ಲ ಒಂದೆನಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೂರಾರು ಜನರು ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುವವರು ಈಗ ಎಲ್ಲಿದ್ದಾರೆ? ಅಸ್ಪೃಶ್ಯತೆ ಇಲ್ಲ ಎನ್ನುವವರೆ ಎಲ್ಲಿದ್ದಾರೆ, ಬನ್ನಿ ಇಲ್ಲಿ ನೋಡಿ. ಇದು ಸರಿಯೇ ಎಂದು ತೀರ್ಮಾನಿಸಿ. ಬಸವಣ್ಣನವರ ನಿಜ ಆಶಯಗಳನ್ನು ಮರೆತು ಜಾತಿ ಪದ್ದತಿ ಆಚರಿಸುತ್ತಿರುವವರು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಲವು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಸ್ಫೃಶ್ಯತೆ ಆಚರಣೆ ವಿಡಿಯೋ ಹರಿದಾಡುತ್ತಿದ್ದಂತೆ ತಹಶೀಲ್ದಾರರ ಗಮನಕ್ಕೂ ಬಂದಿದೆ. ಅವರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಾಧಿಕಾಗಿಉ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿ ವಿಚಾರಣೆ ನಡೆಸುತ್ತೇವೆ. ಘಟನೆ ನಡೆದಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಐ.ಇ ಬಸವರಾಜು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, “ಶನಿವಾರ ಸಂಜೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ವಾಸ್ತವಾಂಶ ಗೊತ್ತಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದೇನೆ. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...