Homeಕರ್ನಾಟಕಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ - ಸಿಟಿ ರವಿ

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

- Advertisement -
- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದಾರೆ.

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ. ‘ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ, ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, “ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಆದ್ಯತೆ ಮೇಲೆ ಮಾಡಬೇಕು. ಇದು ಹೆಲ್ತ್ ಎಮರ್ಜೆನ್ಸಿ, ಕೊರೊನಾ ನಿರ್ವಹಣೆಗೇ ಆಧ್ಯತೆ ಕೊಡಬೇಕು. ಚಾಮರಾಜನಗರ ದುರಂತ ಘೋರ ಅನ್ಯಾಯ. ದುರಂತಕ್ಕೆ ಯಾರೇ ಹೊಣೆಯಾದರೂ ಅವರ ಮೇಲೆ ಕ್ರಮ ಆಗಲೇಬೇಕು. ಬೇರೆ ರಾಜ್ಯಗಳಲ್ಲಿ ನಡೆಯುತ್ತಿದ್ದದ್ದು ನಮ್ಮ ರಾಜ್ಯದಲ್ಲಿ ನಡೆದಿದೆ. ಇದು ದುರ್ದೈವದ ಸಂಗತಿಯಾಗಿದ್ದು, ಕಠಿಣ ಕ್ರಮ ಆದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಹೇಳಿದ್ದಾರೆ.

“ಘಟನೆ ಕುರಿತು ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಬೇರೆ ಜಿಲ್ಲೆಗಳ ಆಕ್ಸಿಜನ್ ಕೊರತೆ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜನರು ಜೀವ ಕೈಯಲ್ಲಿ ಹಿಡಿಯಬೇಕಾದ ಸ್ಥಿತಿ ಇದೆ. ಬೇರೆ ರಾಜ್ಯಗಳ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇದು ಕ್ಷಮೆಗೆ ಅರ್ಹವಿಲ್ಲದ ಘಟನೆ. ಸಚಿವರು ತಪ್ಪಿತಸ್ಥರಾಗಿದ್ದರೆ ಸಚಿವರೇ ಹೊಣೆ ಹೊತ್ತುಕೊಳ್ಳಬೇಕು. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಅವರೇ ಹೊಣೆ. ಸರ್ಕಾರದ ಗಮನಕ್ಕೂ ಬಂದು ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಹೊಣೆ’’ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

“ಹಿಂದೆ ರಾಜಕೀಯ ತುರ್ತು ಪರಿಸ್ಥಿತಿ‌ ಘೋಷಣೆ ಮಾಡಿದ್ದ ರೀತಿಯಲ್ಲಿ, ಪ್ರಸ್ತುತ ಹೆಲ್ತ್ ಎಮರ್ಜೆನ್ಸಿ ಎಂದು ಸರ್ಕಾರ ಘೋಷಿಸಬೇಕು. ಈ ಮೂಲಕ ಉಳಿದೆಲ್ಲ ಇಲಾಖೆ ಕೆಲಸ ಸ್ಥಗಿತ ಮಾಡಿ, ಆರೋಗ್ಯದ ಸಮಸ್ಯೆಗೆ ಮಾತ್ರ ಒತ್ತು ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನೆಲಮಂಗಲದ 10 ಸಾವಿರ ಬೆಡ್‌ನ ಕೊರೊನಾ ಆಸ್ಪತ್ರೆಯ ಬಗ್ಗೆ ಮಾತನಾಡಿದ ಅವರು, “10 ಸಾವಿರ ಬೆಡ್‌ನ ಆಸ್ಪತ್ರೆ ನಿರ್ಮಿಸಿದ್ದು ಹೌದು. ಅದು ಉಪಯೋಗವಾಗದಿದ್ದಾಗ ಅದನ್ನು ಡಿಸ್‌ಮೆಂಟಲ್ ಮಾಡಿದ್ದೆವು. ಈಗ ಪೂರ್ವಯೋಜಿತವಾಗಿ ಹಂತಹಂತವಾಗಿ ಕೇಸು ಹೆಚ್ಚಾಗಿಲ್ಲ, ಒಂದೇ ಸಲಕ್ಕೆ ಪ್ರಕರಣಗಳು ಹೆಚ್ಚಾದವು. ಹೀಗಾಗಿ‌ ನಿಭಾಯಿಸುವಲ್ಲಿ ಸ್ವಲ್ಪ ಕಷ್ಟ ಆಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ. “ಸಮಸ್ಯೆ ಬಗೆಹರಿಯುತ್ತೆ ಎಂದರೆ ಅಧಿಕಾರ ದೊಡ್ಡದಲ್ಲ. ಬೇರೆ ರಾಜ್ಯಗಳಲ್ಲಿ ಯಾರೂ ಸಿಎಂನ ರಾಜೀನಾಮೆ ಕೇಳಿಲ್ಲ. ಆದರೆ ಇಲ್ಲಿ ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಆರೋಗ್ಯ ಸಚಿವ ಸುಧಾಕರ್‌ ಮೇಲೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, “ಸುಧಾಕರ್ ಕೇವಲ‌ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸಚಿವರಲ್ಲ, ಇಡೀ ರಾಜ್ಯದ ಆರೋಗ್ಯ ಮಂತ್ರಿ. ಅವರು ತಮ್ಮ ಜಿಲ್ಲೆಗೆ ಹಾಸಿಗೆಗಳನ್ನು ರಿಸರ್ವ್ ಮಾಡಿದ್ದು ಸರಿಯಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಿಕೊಳ್ಳಬೇಕು. ಹೀಗೆ ಮಾಡಿದರೆ ಅವರು ಸಂಕುಚಿತ ಮನೋಭಾವದರು ಎನಿಸಿಕೊಳ್ಳುತ್ತಾರೆಯೆ ವಿನಃ, ವಿಶಾಲ ಮನೋಭಾವದ ವ್ಯಕ್ತಿ ಎನಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...